ತೆಲುಗು ಚಿತ್ರರಂಗಕ್ಕೆ ಕಾಲಿಡುತ್ತಿರುವ ಸಪ್ತಮಿ ಗೌಡ

ತೆಲುಗು ಚಿತ್ರರಂಗಕ್ಕೆ ಕಾಲಿಡುತ್ತಿರುವ ಸಪ್ತಮಿ ಗೌಡ

ಬೆಂಗಳೂರು: ನಮ್ಮ ಕನ್ನಡ ಚಿತ್ರರಂಗದಿಂದ ಎಷ್ಟೋ ನಾಯಕ ನಟ ಮತ್ತು ನಾಯಕ ನಟಿಯರು ಬೇರೆ ಭಾಷೆಗಳಲ್ಲಿ ಹೋಗಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗದಿಂದ ಈಗಾಗಲೇ ತೆಲುಗು ಚಿತ್ರರಂಗಕ್ಕೆ ರಶ್ಮಿಕ ಮಂದಣ್ಣ ಸೇರಿ ಇನ್ನಿತರ ನಟಿಯರು ಪಾದಾರ್ಪಣೆ ಮಾಡಿ ತಮ್ಮ ಅಭಿನಯದಿಂದ ಅಭಿಮಾನಿಗಳ ಮನ ಗೆದ್ದಿದ್ದಾರೆ.

ಕಾಂತರ ಚಿತ್ರದಲ್ಲಿ ನಟಿಸಿರುವ ನಟಿ ಸಪ್ತಮಿ ಗೌಡ ಕೂಡ ಈಗ ತೆಲುಗು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ರಿಷಬ್ ಶೆಟ್ಟಿ ನಟನೆಯ ಕಾಂತರಾ ಚಿತ್ರದಲ್ಲಿ ನಟಿಸಿರುವ ಸಪ್ತಮಿ ಗೌಡ ಈಗ ತೆಲುಗು ಚಿತ್ರರಂಗದಲ್ಲಿ ಬಣ್ಣ ಹಚ್ಚಲಿದ್ದಾರೆ ಎಂದು ತಿಳಿದುಬಂದಿದೆ.

ವಿವೇಕ್ ಅಗ್ನಿಹೋತ್ರಿ ಅವರ ‘ದಿ ವ್ಯಾಕ್ಸಿನ್ ವಾರ್’ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಿದ ನಟಿ, ಇದೀಗ ನಟ ನಿತಿನ್ ಅವರ ಮುಂಬರುವ ಚಿತ್ರ ‘ತಮ್ಮುಡು’ ಮೂಲತ ತೆಲುಗಿಗೆ ಎಂಟ್ರಿ ನೀಡುತ್ತಿದ್ದಾರೆ. ಈ ಚಿತ್ರವನ್ನು ವೇಣು ಶ್ರೀರಾಮ್ ನಿರ್ದೇಶಿಸುತ್ತಿದ್ದಾರೆ.

ಈ ತಿಂಗಳ ಅಂತ್ಯದ ವೇಳೆಗೆ ಅಥವಾ ಫೆಬ್ರುವರಿ ಆರಂಭದಲ್ಲಿ ಸೆಟ್‌ಗೆ ಸೇರಲಿರುವ ನಟಿ, ತೆಲುಗು ಉದ್ಯಮಕ್ಕೆ ಪ್ರವೇಶಿಸುತ್ತಿರುವ ಸಂತೋಷವನ್ನು ವ್ಯಕ್ತಪಡಿಸುತ್ತಾರೆ. ‘ತೆಲುಗು ಚಿತ್ರರಂಗಕ್ಕೆ ಪ್ರವೇಶಿಸುತ್ತಿರುವುದು ಕುದುರೆ ಸವಾರಿಯಂತಹ ಕೆಲವು ಹೊಸ ಕೌಶಲ್ಯಗಳನ್ನು ಕಲಿಯಲು ನನಗೆ ಅವಕಾಶ ಮಾಡಿಕೊಟ್ಟಿದೆ ಮತ್ತು ಈ ಮೂಲಕ ನಾನು ಹೊಸ ವರ್ಷವನ್ನು ಪ್ರಾರಂಭಿಸಲು ಉತ್ಸುಕಳಾಗಿದ್ದೇನೆ’ ಎನ್ನುತ್ತಾರೆ ಸಪ್ತಮಿ.

 

Related