ರಾಮಲಿಂಗ ರೆಡ್ಡಿ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಸೌಮ್ಯ ರೆಡ್ಡಿಗೆ ಮತ ನೀಡಿ

ರಾಮಲಿಂಗ ರೆಡ್ಡಿ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಸೌಮ್ಯ ರೆಡ್ಡಿಗೆ ಮತ ನೀಡಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರ ಪರವಾಗಿ ಇಂದು ಬುಧವಾರ ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಮುನಿರಾಜು ಹಾಗೂ ಮುರುಗೇಶ್ ಮೊದಲಿಯಾರ್ ಜಕ್ಸಂದ್ರ ವಾರ್ಡ್ನಲ್ಲಿ ಮನೆ ಮನೆಗೆ ತೆರಳಿ ಮತ ಪ್ರಚಾರ ಮಾಡಿದ್ದಾರೆ.

ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು, ಸತತ ಮೂವತ್ತು ವರ್ಷಗಳಿಂದ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಅವರ ಪುತ್ರಿ ಸೌಮ್ಯ ರೆಡ್ಡಿ ಅವರನ್ನು ಅತಿ ಹೆಚ್ಚು ಮತಗಳಿಂದ ಈ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.

ಕಾಂಗ್ರೆಸ್ ಪಕ್ಷದ 138 ವರ್ಷದ ಇತಿಹಾಸದಲ್ಲಿ ಸಾರ್ವಜನಿಕರ ಹಿತ ದೃಷ್ಟಿಯಿಂದ ಹಲವಾರು ಯೋಜನೆಗಳನ್ನು ನೀಡಿದೆ. ಆದರೆ ಮೋದಿ ಸರ್ಕಾರ ಕೇವಲ ಶ್ರೀಮಂತರಿಗೆ ಬಂಡವಾಳಶಾಹಿಗಳಿಗೆ ಮಾತ್ರ ಸಾಕಾರ ನೀಡಿದೆ ಎಂದು ಹೇಳಿದರು. ಕೇವಲ ಹಣ ಉಳ್ಳವರಿಗೆ ಬಿಜೆಪಿ ಸರ್ಕಾರ ಉದ್ದಾರ ಮಾಡುತ್ತಿದೆ ಹೊರತಾಗಿ ಬಡವ ಬಗ್ಗರಿಗೆ ಒಂದೊಳ್ಳೆ ಕಾರ್ಯವನ್ನು ಕೈಗೊಂಡಿಲ್ಲವ. ಬಡವರ ಬಗ್ಗೆ ಯಾವುದೇ ರೀತಿ ಯೋಜನೆಗಳನ್ನು ಮಾಡಿಲ್ಲ ಎಂದು ದೂರಿದರು.

ಈ ಕಾರ್ಯಕ್ರಮದಲ್ಲಿ ಸ್ಥಳೀಯ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಮತ್ತಿತರರು ಭಾಗಿಯಾಗಿದ್ದರು.

Related