ಕೆಎಂಎಫ್ ಮಾದರಿಯಲ್ಲಿ ಕುರಿ ಸಹಕಾರ ಸಂಘ

ಕೆಎಂಎಫ್ ಮಾದರಿಯಲ್ಲಿ ಕುರಿ ಸಹಕಾರ ಸಂಘ

ಹಗರಿಬೊಮ್ಮನಹಳ್ಳಿ : ಉಪಕಸುಬಾಗಿದ್ದ ಹೈನುಗಾರಿಕೆಯನ್ನು ರೈತರು ಮುಖ್ಯ ಕಸುಬನ್ನಾಗಿ ಮಾಡಿಕೊಂಡಿದ್ದಾರೆ ಎಂದು ರಾಬಕೊ ಹಾಲು ಉತ್ಪಾದಕ ಸಂಘದ ಅಧ್ಯಕ್ಷ ಹಾಗೂ ಕ್ಷೇತ್ರದ ಶಾಸಕ ಎಸ್.ಭೀಮನಾಯ್ಕ್ ತಿಳಿಸಿದರು.

ಪಟ್ಟಣದ ಪಶು ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಭೀಮನಾಯ್ಕ್, ಬಹಳಷ್ಟು ರೈತರು ಹೈನುಗಾರಿಕೆಯತ್ತ ಮುಖ ಮಾಡಿದ್ದಾರೆ. ಕುರಿ, ಕೋಳಿ ಸಾಕಾಣಿಕೆಯಲ್ಲೇ ರೈತರು ತಮ್ಮನ್ನು ತಾವು ತೊಡಗಿಸಿಕೊಳ್ಳುವುದರ ಮೂಲಕ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ.

ಬಹಳಷ್ಟು ಜನರು ಜೀವನ ನಿರ್ವಹಣೆಗೆ ಹೈನುಗಾರಿಕೆಯನ್ನೇ ಅವಲಂಭಿಸಿದ್ದು, ಕುರಿ, ಹಸು ಇತರ ಸಾಕು ಪ್ರಾಣಿಗಳ ಸೂಕ್ತ ಚಿಕಿತ್ಸೆಗಾಗಿ ಸುಸಜ್ಜಿತವಾದ ಪಶು ಆಸ್ಪತ್ರೆಯ ಅವಶ್ಯಕತೆ ಇತ್ತು. ಆದ್ದರಿಂದ ಪಟ್ಟಣದಲ್ಲಿ ಆರ್‌ಐಡಿಎಫ್ ಯೋಜನೆಯಡಿಯಲ್ಲಿ 40 ಲಕ್ಷದ 50 ಸಾವಿರ ಅನುದಾನದ ಸುಸಜ್ಜಿತವಾದ ಪಶು ಆಸ್ಪತ್ರೆಯ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗಿದೆ. ಇನ್ನು ಒಂದು ಎಕರೆ ಜಾಗದಲ್ಲಿ ಆಸ್ಪತ್ರೆ ಸುತ್ತಲೂ ಶಾಸಕರ 50 ಲಕ್ಷ ರೂ. ಅನುದಾನದಲ್ಲಿ ಕಾಂಪೌಂಡ್ ನಿರ್ಮಿಸುವ ಭರವಸೆ ನೀಡಿದರು.

Related