ಶೋಭಾ ಕರಂದ್ಲಾಜೆ ಭರ್ಜರಿ ಮತ ಪ್ರಚಾರ

ಶೋಭಾ ಕರಂದ್ಲಾಜೆ ಭರ್ಜರಿ ಮತ ಪ್ರಚಾರ

ಬೆಂಗಳೂರು: ಲೋಕಸಭಾ ಚುನಾವಣೆಯ ಕಣ ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಂಗೆರುತ್ತಿದ್ದು ಬೆಂಗಳೂರು ಉತ್ತರ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿರುವ ಶೋಭಾ ಕರಂದ್ಲಾಜೆ ಅವರ ಪರವಾಗಿ ಕೆ ಆರ್ ಪುರಂ ನ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ್ದಾರೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬರುವಂತಹ ಎಚ್. ಎ.ಎಲ್.ವಾರ್ಡ್, ವಿಜ್ಞಾನನಗರ ವಾರ್ಡ್, ಮತ್ತು ನಾರಾಯಣಪುರ ವಾರ್ಡ್‌ಗಳಲ್ಲಿ ಬೃಹತ್ ಬೈಕ್ ರ್ಯಾಲಿ ಮೂಲಕ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರೊಂದಿಗೆ ಮತಯಾಚಿಸಿದರು.

ಈ ಸಂದರ್ಭದಲ್ಲಿ ಚುನಾವಣಾ ಸಂಚಾಲಕ ಸಚ್ಚಿದಾನಂದ ಮೂರ್ತಿ, ಬಿಬಿಎಂಪಿ ಮಾಜಿ ಸದಸ್ಯರಾದ ಎಸ್.ಜಿ. ನಾಗರಾಜ್, ಸುರೇಶ್, ಮಹಿಳಾ ಮೋರ್ಚಾ ಮಾಜಿ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ, ಮಂಡಲ ಅಧ್ಯಕ್ಷೆ ಮುನೇಗೌಡ, ಪ್ರಧಾನ ಕಾರ್ಯದರ್ಶಿ ರಮೇಶ್, ಜಿಲ್ಲಾ ಮಂಡಲ ಮತ್ತು ವಾರ್ಡ್ ಪದಾಧಿಕಾರಿಗಳು ವಾರ್ಡಿನ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.

 

Related