ಹಣದ ಆಸೆ ತೋರಿಸಿ ಸಾರ್ವಜನಿಕರಿಗೆ ವಂಚನೆ

ಹಣದ ಆಸೆ ತೋರಿಸಿ ಸಾರ್ವಜನಿಕರಿಗೆ ವಂಚನೆ

ಮೈಸೂರು : ಹಣದ ಆಸೆ ತೋರಿಸಿ ಸಾರ್ವಜನಿಕರಿಗೆ ವಂಚನೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮೈಸೂರಿನ ದೇವರಾಜ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ಚಂದ್ರಮೋಹನ್(57), ಕೇರಳದ ಟಿ.ವಿ ಇಬ್ರಾಹಿಂ (50), ಬೆಂಗಳೂರಿನವರಾದ ಗಿರಿನಾಥನ್ (49), ಗೋಪಿ(40) ಬಂಧಿತರಾಗಿದ್ದಾರೆ.

ಸೆಪ್ಟೆಂಬರ್ 26 ರಂದು ಪೊಲೀಸರು ಠಾಣಾ ಸರಹದ್ದಿನ ಧನ್ವಂತ್ರಿ ರಸ್ತೆಯ ಗಾಯಿತ್ರಿ ಭವನ್ ಹೋಟೆಲ್‌ನ ರೂಮ್ ನಂ.101 ಮತ್ತು 102 ಮೇಲೆ ದಾಳಿ ಮಾಡಿದ್ದಾರೆ.

ರೈಸ್ ಪುಲ್ಲಿಂಗ್ ಗೆ ಸಂಬAಧಿಸಿದ ನಕಲಿ ಸಾಮಗ್ರಿಗಳನ್ನು ಹಾಗೂ ತಮ್ಮ ಮೊಬೈಲ್ಗಳಲ್ಲಿದ್ದ ರೈಸ್ ಪುಲ್ಲಿಂಗ್ ಗೆ ಸಂಬAಧಿಸಿದ ವಿಡಿಯೋಗಳನ್ನು ತೋರಿಸಿ ಈ ಸಾಮಾಗ್ರಿಗಳಿಂದ ಕೋಟಿಗಟ್ಟಲೆ ಹಣ ಸಂಪಾದಿಸಬಹುದೆAದು ಸಾರ್ವಜನಿಕರಿಗೆ ಆಮಿಷವೊಡ್ಡಿ ಮೋಸ ಮಾಡುತ್ತಿದ್ದರು ಎನ್ನುವ ಆರೋಪದ ಮೇಲೆ ಇವರನ್ನು ಬಂಧಿಸಲಾಗಿದೆ.

Related