ಪುತ್ರನ ಮದುವೆಗೆ ಸಿದ್ದಾರಾಮಯ್ಯ ಆಹ್ವಾನಿಸಿದ ಸುಮಲತಾ

ಪುತ್ರನ ಮದುವೆಗೆ ಸಿದ್ದಾರಾಮಯ್ಯ ಆಹ್ವಾನಿಸಿದ ಸುಮಲತಾ

ಬೆಂಗಳೂರು: ಇದೇ ಜೂನ್ 5ಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ ಅವರ ಮಗನಾದ ಅಭಿಷೇಕ್ ವಿವಾಹ  ಮಹೂರ್ತವಿದ್ದು, ಸುಮಲತಾ ಅಂಬರೀಷ್  ಅವರು ರಾಜಕೀಯ ಕೆಸರೆರಚಾಟಗಳನ್ನು ಬದಿಗೊತ್ತಿದ ನೂತನ ಮುಖ್ಯಮಂತ್ರಿ ಆಗಿರುವಂತಹ ಸಿದ್ದರಾಮಯ್ಯ ಅವರಿಗೆ ಅಭಿಷೇಕ್ ಅಂಬರೀಶ್ ಅವರ ವಿವಾಹಕ್ಕೆ ಆಮಂತ್ರಣ ನೀಡಿ ಆಹ್ವಾನಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಆಮಂತ್ರಣ ಪತ್ರಿಕೆ ನೀಡಿದ ಫೋಟೋಗಳನ್ನ ಸ್ವತಃ ಸುಮಲತಾ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ವಿವಾಹಕ್ಕೆ ದಿನಗಣನೆ ಶುರುವಾಗಿದ್ದು, ಚಂದನವನದಲ್ಲಿ ಮತ್ತೊಂದು ಜೋಡಿ ಹಸೆಮಣೆ ಏರಲು ಸಜ್ಜಾಗಿದೆ.

ಅಭಿಷೇಕ್ ಅಂಬರೀಶ್ ಅವರ ವಿವಾಹ ಮಾಡೆಲ್ ಅವಿವಾ ಬಿದ್ದಪ್ ಜೊತೆಗೆ ಫಿಕ್ಸ್ ಆಗಿದ್ದು, ಜೂನ್ 5ರಂದು ಅದ್ದೂರಿಯಾಗಿ ವಿವಾಹ ಕಾರ್ಯಕ್ರಮ ಜರುಗಲಿದೆ.

 

Related