ಸುಳ್ಳು ಸುದ್ದಿ ಹರಡುವುದರಲ್ಲಿ ಸಿದ್ಧರಾಮಯ್ಯ ನಿಸ್ಸೀಮರು

ಸುಳ್ಳು ಸುದ್ದಿ ಹರಡುವುದರಲ್ಲಿ ಸಿದ್ಧರಾಮಯ್ಯ ನಿಸ್ಸೀಮರು

ಉಡುಪಿ : ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ದಿನದಿಂದ ದಿನಕ್ಕೆ ಕಾಂಗ್ರೆಸ್ ಅಧಪತನ ಕಂಡು ಹತಾಶೆಯ ಮನೋಭಾವದಿಂದ ಕಂಡ ಕಂಡಲ್ಲಿ ಬಿಜೆಪಿ ವಿರುದ್ಧ ಸುಳ್ಳು ಸುದ್ದಿ ಹರಡುವುದರಲ್ಲಿ ನಿಸ್ಸೀಮರು ಎನಿಸಿಕೊಂಡಿದ್ದಾರೆ ಎಂದು ಜಿಲ್ಲಾ ಬಿಜೆಪಿ ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ ಜನಪರ ಆಡಳಿತ ಹಾಗೂ ವಿನೂತನ ಯೋಜನೆಗಳಿಂದ ಸಿದ್ಧರಾಮಯ್ಯ ಕಂಗೆಟ್ಟಿದ್ದಾರೆ.

ರೈತರ ಆದಾಯ ದ್ವಿಗುಣಗೊಳಿಸುವ ಸದುದ್ದೇಶದಿಂದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತಸ್ನೇಹಿ ನೂತನ ಕೃಷಿ ಕಾಯ್ದೆಯನ್ನು ಜಾರಿಗೆ ತರುವಲ್ಲಿ ಶ್ರಮಿಸಿದರೆ, ಕಾಂಗ್ರೆಸ್

ಸುಪ್ರೀ ಕೋರ್ಟಿನ ತೀರ್ಪಿಗೆ ಅನುಗುಣವಾಗಿ ದೇಶದ ಕೋಟ್ಯಾಂತರ ಜನತೆಯ ಶೃದ್ಧಾ ಕೇಂದ್ರವಾಗಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಗೊಳ್ಳುತ್ತಿರುವ ವಿಚಾರದಲ್ಲೂ ಸಿದ್ಧರಾಮಯ್ಯ ಅಪಸ್ವರ ಎತ್ತಿರುವುದು ಅವರ ಬೌದ್ಧಿಕ ದಿವಾಳಿತನಕ್ಕೆ ಜ್ವಲಂತ ಸಾಕ್ಷಿ ಸಿದ್ಧರಾಮಯ್ಯ ನವರಿಂದ ಬಿಜೆಪಿಗೆ ನೈತಿಕತೆಯ ಪಾಠದ ಅಗತ್ಯವಿಲ್ಲ ಎಂದು ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ ಹಾಗೂ ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ ಮತ್ತು ಗಿರೀಶ್ ಎಮ್. ಅಂಚನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related