ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ಕೆಂಡಾಮಂಡಲ

ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ಕೆಂಡಾಮಂಡಲ

ಶಿವಮೊಗ್ಗ : ಶಿವಮೊಗ್ಗದಲ್ಲಿ ಲವ್ ಜಿಹಾದ್ ವಿಚಾರದಲ್ಲಿ ಸಿದ್ದರಾಮಯ್ಯ ಕ್ರಾಸ್ ಬೀಡ್, ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಸಿದ್ದರಾಮಯ್ಯ ಹಿಂದೂಗಳ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯನವರಿಗೆ ಹೆಣ್ಣುಮಕ್ಕಳು, ಮೊಮ್ಮಗಳು ಇಲ್ಲ. ಅದಕ್ಕೆ ಅವರಿಗೆ ನೋವು ಅರ್ಥವಾಗಲ್ಲ. ಇಂದಿರಾ ಗಾಂಧಿ, ಸೋನಿಯಾ, ಪ್ರಿಯಾಂಕಾ ಕ್ರಾಸ್ ಬೀಡಾ? ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಇಂತಹ ಪದ ಬಳಕೆ ಮಾಡಲು ನಾಚಿಕೆಯಾಗಬೇಕು. ಅವರು ಕಾಂಗ್ರೆಸ್ ನಲ್ಲಿರಲು ಅಯೋಗ್ಯರು. ಹೆಣ್ಣೆಂದರೆ ಕೇವಲ ಕಾಮದ ವಸ್ತು ಎಂದುಕೊAಡಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related