ನನ್ನ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ, ಯಶ್ ಬರಬೇಕು

ನನ್ನ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ, ಯಶ್ ಬರಬೇಕು

ಮಂಡ್ಯ : ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ನನ್ನ ಅಂತ್ಯಕ್ರಿಯೆಗೆ ರಾಕಿಂಗ್ ಸ್ಟಾರ್ ಯಶ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬರಬೇಕು ಎಂಬುದಾಗಿ ಪತ್ರ ಬರೆದಿಟ್ಟು ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಕೋಡಿದೊಡ್ಡಿ ಗ್ರಾಮದ ಕೃಷ್ಣ(25) ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದನು. ಕೆಲಸ ಮುಗಿಸಿ, ನಿನ್ನೆ ಕೆಲಸಕ್ಕೆ ರಜೆ ಹಾಕಿ ಮನೆಯಲ್ಲಿದ್ದಂತ ಕೃಷ್ಣ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ರಾಕಿಂಗ್ ಸ್ಟಾರ್ ಯಶ್ ಅಂದರೆ ನನಗೆ ತುಂಬಾ ಅಭಿಮಾನ ನಾನು ನಿಮ್ಮ ಅಪ್ಪಟ ಅಭಿಮಾನಿ ಕೂಡ ನೀವು ನನ್ನ ಅಂತ್ಯಕ್ರಿಯೆಗೆ ಆಗಮಿಸಬೇಕು. ಈ ಮೂಲಕ ನನ್ನ ಕೊನೆಯ ಆಸೆ ಈಡೇರಿಸುವಂತೆ ಕೋರಿಕೊಂಡಿದ್ದಾನೆ.

ಈ ಹಿನ್ನಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಅಭಿಮಾನಿಯ ಕೊನೆಯ ಆಸೆ ಈಡೇರಿಸೋದಕ್ಕೆ ಕೋಡಿದೊಡ್ಡಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಇತ್ತ ನಟ ಯಶ್ ಅಭಿಮಾನಿಯ ಕೊನೆಯ ಆಸೆ ಈಡೇರಿಸುತ್ತಾರಾ ಎಂಬುದನ್ನು ಈಗ ಕಾದು ನೋಡಬೇಕಿದೆ.

Related