ಸಿಲಿಕಾನ್‌ ಸಿಟಿ: ಕಂಬಳ ಆಯೋಜಕರ ವಿರುದ್ಧ ದೂರು

ಸಿಲಿಕಾನ್‌ ಸಿಟಿ: ಕಂಬಳ ಆಯೋಜಕರ ವಿರುದ್ಧ ದೂರು

ಬೆಂಗಳೂರು: ಕರಾವಳಿಯ ಇತಿಹಾಸ ಪ್ರಸಿದ್ಧ ಕ್ರೀಡೆಯಾದ ಕಂಬಳ ಇದೇ ಮೊದಲ ಬಾರಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಅತಿ ವಿಜ್ರಂಭಣೆಯಿಂದ ಯಶಸ್ವಿಗೊಂಡಿದೆ.

ಇನ್ನು ಬೆಂಗಳೂರಿನಲ್ಲಿ ಕಂಬಳ ಅಯೋಧ್ಯಕರ ವಿರುದ್ಧ ದೂರು ದಾಖಲು ಮಾಡಲಾಗಿ. ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳದಲ್ಲಿ ಫ್ಲೆಕ್ಸ್​, ಬ್ಯಾನರ್​ ಅಳವಡಿಸಿದ್ದಕ್ಕೆ ಬಿಬಿಎಂಪಿ ವಾರ್ಡ್ ನ ಕಂದಾಯ ನಿರೀಕ್ಷಕ ನೀಡಿದ ದೂರಿನ ಮೇರೆಗೆ ಕಂಬಳ ಆಯೋಜಕರ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ದಾಳಿ ಮಾಡಿ ಫ್ಲೆಕ್ಸ್​, ಬ್ಯಾನರ್ ತೆರವುಗೊಳಿಸಿತ್ತು. ಅಲ್ಲದೇ ದಂಡ ಸಹ ವಿಧಿಸಿತ್ತು. ಇದೀಗ ಪ್ರಕರವನ್ನೂ ದಾಖಲಿಸಿದೆ. ಬೆಂಗಳೂರಿನಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಸಂಬಂಧ ಬಿಬಿಎಂಪಿಗೆ ಹಲವು ಬಾರಿ ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೇ ಈ ಬಗ್ಗೆ ಖಡಕ್ ಎಚ್ಚರಿಕೆಯನ್ನು ಸಹ ನೀಡಿತ್ತು. ಇದರಿಂದ ಎಚ್ಚೆತ್ತುಕೊಂಡಿರುವ ಬಿಬಿಎಂಪಿ, ಅನಧಿಕೃತ ಫ್ಲೆಕ್ಸ್, ಬ್ಯಾನರ್​ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾರೆಲ್ಲಾ ಬ್ಯಾನರ್​ ಹಾಕಿದ್ದಾರೋ ಅವರಿಗೆ ದಂಡ ವಿಧಿಸುವ ಕಾರ್ಯ ಮಾಡುತ್ತಿದೆ.

 

 

Related