ಬೆಂಗಳೂರು : ಬೆಂಗಳೂರಿನ ವೃಷಭಾವತಿ ಕಾಲುವೆ ಕಾಮಗಾರಿಯ ಸಂದರ್ಭದಲ್ಲಿ ಮಣ್ಣು ಕುಸಿದು ಕಾರ್ಮಿಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದುರಂತ ಘಟನೆ ಇಂದು ನಡೆದಿದೆ.
ಕೆಂಗೇರಿಯ ವೃಷಭಾವತಿ ಕಾಲುವೆ ಕಾಮಗಾರಿ ವೇಳೆ ಅವಘಡ ನಡೆದಿದ್ದು, 21 ವರ್ಷದ ಚಂಚಲ್ ಬುರ್ಮಾನ್ ವಾಸ್ತು ಪ್ರಾಪರ್ಟೀಸ್ ಸಂಸ್ಥೆಯಿಂದ ಕೆಲಸಕ್ಕೆ ಬಂದಿದ್ದ ಕಾರ್ಮಿಕ ಚಂಚಲ್ ಇಂದು ಚಂಚಲ್ ಮೇಲೆ ಮಣ್ಣಿನ ರಾಶಿ ಕುಸಿದು, ಅವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.