ದೆಹಲಿ ಬಳಿಯ ಸೇನಾ ಕ್ಯಾಂಪ್‌ನಲ್ಲಿ ಸೈನಿಕ ಆತ್ಮಹತ್ಯೆ

ದೆಹಲಿ ಬಳಿಯ ಸೇನಾ ಕ್ಯಾಂಪ್‌ನಲ್ಲಿ ಸೈನಿಕ ಆತ್ಮಹತ್ಯೆ

ಮುದ್ದೇಬಿಹಾಳ : ದೆಹಲಿಯ ಮಿರಟ್ ಬಳಿ ಇರುವ ಎಂ.ಇ.ಜಿ ಯೂನಿಟ್-9ರ ಸೇನಾ ಕ್ಯಾಂಪ್‌ನಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದ ವೇಳೆಯೇ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಜಟ್ಟಗಿ ಗ್ರಾಮದ ಸೈನಿಕ ಮಂಜುನಾಥ ಯಲ್ಲಪ್ಪ ಹೂಗಾರ ಭಾನುವಾರ  ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.

(22) ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ತರಬೇತಿ ಮುಗಿಸಿಕೊಂಡು ಸೇವೆಗೆ ಹಾಜರಾಗಿದ್ದ ಮಂಜುನಾಥ ಹೂಗಾರ ಇದೀಗ ಆತ್ಮಹತ್ಯೆಗೆ ಮಾಡಿಕೊಂಡಿರುವುದು ದಿಗ್ಭçಮೆ ಮೂಡಿಸಿದೆ. ಈ ವಿಷಯವನ್ನು ಸೇನಾ ಕ್ಯಾಂಪನ ಅಧಿಕಾರಿಗಳು ಮುದ್ದೇಬಿಹಾಳ ಪೊಲೀಸ್ ಠಾಣೆಗೆ ದೂರವಾಣಿ ಕರೆ ಮಾಡಿ ಬೀಟ್ ಪೊಲೀಸರ ಮೂಲಕ ಕುಟುಂಬದವರಿಗೆ ಮಾಹಿತಿ ತಲುಪಿಸಿದ್ದಾರೆ.

ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿರುವ ಮಂಜುನಾಥ ಹೂಗಾರನ ಸಂಬಂಧಿಕ ಲಕ್ಕಪ್ಪ ಬೊಮ್ಮಣಗಿ, ಮಂಜುನಾಥನ ಸ್ನೇಹಿತ ಕುಮಾರ ಅವರು, ಸೇನಾ ವಲಯದ ಅಧಿಕಾರಿಗಳು ಸದ್ಯಕ್ಕೆ ಆತ ಕೆಲಸಕ್ಕೆ ಹೋದ ಸಂದರ್ಭದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ.

ಚಿಕ್ಕ ವಯಸ್ಸಿನಲ್ಲಿಯೇ ಸೇನೆಗೆ ಸೇರಿದ್ದ ಮಂಜುನಾಥನಿಗೆ ಆತ್ಮಹತ್ಯೆ ಮಾಡಿಕೊಳ್ಳುವಂತಹ ಸಮಸ್ಯೆಗಳು ಇರಲಿಲ್ಲ. ಕುಟುಂಬದೊAದಿಗೂ ಚೆನ್ನಾಗಿಯೇ ಇದ್ದ. ಆದರೆ ಯಾಕೆ ಹೀಗೆ ಮಾಡಿಕೊಂಡಿದ್ದಾನೆ ಎಂಬುದು ಗೊತ್ತಾಗಿಲ್ಲ ಎಂದು ತಿಳಿಸಿದರು.

ಸಾವನ್ನಪ್ಪಿರುವ ಸೈನಿಕ ಮಂಜುನಾಥನಿಗೆ ಮದುವೆ ಆಗಿರಲಿಲ್ಲ.  ಮಂಜುನಾಥಗೆ ತಂದೆ ಯಲ್ಲಪ್ಪ, ತಾಯಿ ನಾಗಮ್ಮ, ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಇದ್ದಾರೆ. ಎರಡು ದಿನಗಳಲ್ಲಿ ಸ್ವಗ್ರಾಮಕ್ಕೆ ಪಾರ್ಥೀವ ಶರೀರ ಸೇನಾ ಕ್ಯಾಂಪನಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿರುವ ಸೈನಿಕ ಮಂಜುನಾಥ ಹೂಗಾರನ ಕಳೆಬರ ಎರಡು ದಿನಗಳಲ್ಲಿ ಸ್ವಗ್ರಾಮಕ್ಕೆ ಆಗಮಿಸುವ ನಿರೀಕ್ಷೆ ಇದೆ. ಸದ್ಯಕ್ಕೆ ದೆಹಲಿ ಸೇನಾ ಆಸ್ಪತ್ರೆಯಲ್ಲಿ ಮೃತ ದೆಹವಿದ್ದು ಮರಣೋತ್ತರ ಪರೀಕ್ಷೆ ನಡೆದ ಬಳಿಕ ವಿಮಾನದ ಮೂಲಕ ಬೆಂಗಳೂರು, ಇಲ್ಲವೇ ಬೆಳಗಾವಿ ಮೂಲಕ ಮುದ್ದೇಬಿಹಾಳಕ್ಕೆ ಆಗಮಿಸುವ ನಿರೀಕ್ಷೆ ಇದೆ ಎಂದು ಅವರ ಆಪ್ತ ವಲಯದ ಮೂಲಗಳಿಂದ ತಿಳಿದು ಬಂದಿದೆ.

Related