ಮಾವನನ್ನೇ ಕೊಲೆ ಮಾಡಿದ ಅಳಿಯ!

ಮಾವನನ್ನೇ ಕೊಲೆ ಮಾಡಿದ ಅಳಿಯ!

ಚಿಕ್ಕೋಡಿ : ದಸರಾ ಹಬ್ಬದಲ್ಲಿ ಫರಾಳ ಕೊಡಲು ಬಂದ ಪತ್ನಿಯ ತಂದೆಯನ್ನೇ ನಿವೃತ್ತ ಸೈನಿಕ ಕೊಲೆ ಮಾಡಿದ ದಾರುಣ ಘಟನೆ ಚಿಕ್ಕೋಡಿ ತಾಲೂಕಿನ ಇಟ್ನಾಳ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಕರೋಶಿ ಗ್ರಾಮದ ಸಿದ್ದಪ್ಪ ರಾಯಪ್ಪ ಖೋತ(58) ಕೊಲೆಯಾದ ವ್ಯಕ್ತಿ. ಇಟ್ನಾಳ ಗ್ರಾಮದ ನಿವೃತ್ತ ಸೈನಿಕ ಬಾಳೇಶ ಶ್ರೀಕಾಂತ ಬೋರನ್ನವರ(38) ಕೊಲೆ ಆರೋಪಿ.
ಕೊಲೆಯಾದ ಸಿದ್ದಪ್ಪ ಖೋತ ತನ್ನ ಪುತ್ರಿಯನ್ನು ಇಟ್ನಾಳ ಗ್ರಾಮದ ಸೈನಿಕ ಬಾಳೇಶ ಬೋರನ್ನವರಗೆ 10 ವರ್ಷಗಳ ಹಿಂದೆ ಮದುವೆ ಮಾಡಿ ಕೊಟ್ಟಿದ್ದ. ಮಕ್ಕಳಾಗಿಲ್ಲವೆಂದು ಬಾಳೇಶ ಪದೇ ಪದೇ ಪತ್ನಿ ಜೊತೆ ಜಗಳ ಮಾಡುತ್ತಿದ್ದನು. ಜಗಳ ಬಿಡಿಸಲು ಹೋದ ಮಾವ ಸಿದ್ದಪ್ಪನ ತಲೆಗೆ ತೀವ್ರ ಪೆಟ್ಟಾಗಿದೆ. ಕೂಡಲೇ

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಆದರೂ ಚಿಕಿತ್ಸೆ ಫಲಕಾರಿಯಾಗದೇ ಸಿದ್ದಪ್ಪ ಮೃತಪಟ್ಟಿದ್ದಾನೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ನಿವೃತ್ತ ಸೈನಿಕ ಬಾಳೇಶ ಬೋರನ್ನವರ ವಿರುದ್ಧ ಕೊಲೆ ದೂರು ದಾಖಲಾಗಿದೆ.

Related