ಸೌಮ್ಯ ರೆಡ್ಡಿ ಅವರ ಮತ ಯಾಚಿಸಿದ ಸಾರಿಗೆ ಸಚಿವರು

ಸೌಮ್ಯ ರೆಡ್ಡಿ ಅವರ ಮತ ಯಾಚಿಸಿದ ಸಾರಿಗೆ ಸಚಿವರು

ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹೈ ವೋಲ್ಟೇಜ್ ಆಗಿ ನಿರ್ಮಾಣಗೊಂಡಿರುವ ಬೆಂಗಳೂರು ದಕ್ಷಿಣ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೌಮ್ಯ ರೆಡ್ಡಿ ಮತ್ತು ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ಅವರು ಕಣದಲ್ಲಿದ್ದಾರೆ.

ಇನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರ ಪರವಾಗಿ ಇಂದು ಸಾರಿಗೆ ಸಚಿವರಾಗಿರುವಂತಹ ರಾಮಲಿಂಗ ರೆಡ್ಡಿ ಅವರು ಮತಯಾಚನೆ ಮಾಡಿದ್ದಾರೆ.

ರಾಮಲಿಂಗ ರೆಡ್ಡಿಯವರು ಬೊಮ್ಮನಹಳ್ಳಿ ಕ್ಷೇತ್ರದ ಗಾರ್ಮೆಂಟ್ಸ್ ಕಾರ್ಮಿಕರಿಗೆ, ಕಾಂಗ್ರೆಸ್ ಪಕ್ಷದ ಐದು ಗ್ಯಾರೆಂಟಿ ಮತ್ತು ಸಾಧನೆ ಹಾಗೂ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಬಗ್ಗೆ ತಿಳಿಸುವ ಸಂದರ್ಭದಲ್ಲಿ ತಮ್ಮ ಮಗಳ ಪರವಾಗಿ ಮತಯಾಚನೆ ಮಾಡಿದರು.

Related