ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ: ಪ್ರಹ್ಲಾದ್ ಜೋಶಿ

ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ: ಪ್ರಹ್ಲಾದ್ ಜೋಶಿ

ದಾವಣಗೆರೆ: ನಮ್ಮ ಪಕ್ಷದಲ್ಲಿ ಯಾರಿಗೆ ಏನೇ ತೊಂದರೆಯಾದರೂ, ಏನೇ ಸಮಸ್ಯೆ ಇದ್ದರೂ ಬಿಜೆಪಿಯ ರಾಜ್ಯದ ಹಿರಿನಾಯಕರಿದ್ದಾರೆ ಮತ್ತು ಕೇಂದ್ರದ ಹಿರಿಯ ನಾಯಕರಿದ್ದಾರೆ ಅವರ ಜೊತೆ ಮಾತನಾಡಿ ಬಗೆಹರಿಸಿಕೊಳ್ಳಬೇಕು ಅದು ಬಿಟ್ಟು ಪಕ್ಷದವರ ಮೇಲೆ ಇಲ್ಲದ ಸಲದ ಆರೋಪ ಮಾಡಿದರೆ ಯಾರು ಸಹಿಸುವುದಿಲ್ಲವೆಂದು ಕೇಂದ್ರ ಸಚಿವ ಪ್ರಹಲ್ಲಾ ಜೋಶಿ ಅವರು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬಗ್ಗೆ ಬಿಜೆಪಿಯ ಶಾಸಕ ಬಸವರಾಜ್ ಯತ್ನಾಳ್ ಅವರು ಅವಹೇಳನಕಾರಿ ಹೇಳಿಕೆಯನ್ನು ನೀಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ವಿಜಯೇಂದ್ರ ಅವರನ್ನ ರಾಷ್ಟ್ರೀಯ ನಾಯಕರು ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಅದರ ಬಗ್ಗೆ ವಿರೋಧ ಮಾಡೋದು ತಪ್ಪು ಎಂದ ತಿಳಿಸಿದ್ದಾರೆ.

ಸಿದ್ದರಾಮಯ್ಯನವರು ಬಿಜೆಪಿ ಸರ್ಕಾರ ಬುರುಡೆ ಸರ್ಕಾರ ಅಂತ ಆರೋಪ ಮಾಡ್ತಾರೆ. ಸಿದ್ದರಾಮಯ್ಯನವರಂತಹ ಸುಳ್ಳುಗಾರನಿಲ್ಲ. ಇವರ ಆಡಳಿತ ಅವಧಿಯಲ್ಲಿ ಇವರಿಗೆ ಗ್ಯಾಸ್ ಕೊಡೋ ಯೋಗ್ಯತೆ ಇರಲಿಲ್ಲ. ಅವರಿಗೆ ಮನೆ ಮನೆ ಗ್ಯಾಸ್ ಸಿಗುವಂತೆ ಮಾಡಿದ್ದು ಪ್ರಧಾನಿ ಮೋದಿ, ಪ್ರಧಾನಿ ಮೋದಿಯವರು 4 ಕೋಟಿ ಮನೆಗಳನ್ನ ಕೊಟ್ಟಿದ್ದಾರೆ. ಆದರೂ ಸಿದ್ದರಾಮಯ್ಯ ಅವರು ಬುರುಡೆ ಸರ್ಕಾರ ಅಂತಾರೆ. ತಮ್ಮ ಸರ್ಕಾರದ ನ್ಯೂನ್ಯತೆಗಳನ್ನ ಮುಚ್ಚಿ ಹಾಕಲು ಈ ರೀತಿ ವಿಷಯಾಂತರ ಮಾಡ್ತಾರೆ ಅಂತ ಸಚಿವ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related