ಕೇಂದ್ರದಲ್ಲಿ ಮತ್ತೆ ಮೋದಿ ಅಲೆ ಎಬ್ಬಿಸಲು ರಾಜ್ಯ ಬಿಜೆಪಿ ರಣತಂತ್ರ

ಕೇಂದ್ರದಲ್ಲಿ ಮತ್ತೆ ಮೋದಿ ಅಲೆ ಎಬ್ಬಿಸಲು ರಾಜ್ಯ ಬಿಜೆಪಿ ರಣತಂತ್ರ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ, ಬಿಜೆಪಿಯ ರಾಜ್ಯ ಅಧ್ಯಕ್ಷರಾಗಿರುವ ಬಿ ವೈ ವಿಜಯೇಂದ್ರ ಅವರು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ 28 ಕ್ಷೇತ್ರಕ್ಕೆ 28 ಕ್ಷೇತ್ರ ಗೆಲ್ಲುವ ನಿರೀಕ್ಷೆಯಲ್ಲಿರುವ ಅವರು, ರಾಜ್ಯದ ಬಿಜೆಪಿ ನಾಯಕರುಗಳಿಗೆ ಈ ಬಾರಿ ನಮ್ಮ ಪಕ್ಷ ಗೆಲ್ಲಲು ಯಾವೆಲ್ಲ ಕೆಲಸವನ್ನು ಮಾಡಬೇಕೆಂದು ಬಿಜೆಪಿ ಮುಖಂಡರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.

ಲೋಕಸಭಾ ಚುನಾವಣೆ ದೃಷ್ಟಿಯಿಂದ ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಕಾರ್ಯಾಗಾರ ನಡೆಯಿತು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಚುನಾವಣೆ ಹಿನ್ನೆಲೆಯಲ್ಲಿ ಮಾಧ್ಯಮ ಪ್ರಕೋಷ್ಠದ ಜವಾಬ್ದಾರಿ ಅತ್ಯಂತ ಮಹತ್ವದ್ದು ಎಂದು ತಿಳಿಸಿದರು.

ರಾಷ್ಟ್ರೀಯ ವಕ್ತಾರರಾದ ಸೈಯದ್ ಜಫರ್ ಇಸ್ಲಾಂ, ತೂಹಿನ್ ಸಿನ್ಹಾ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಉಪಸ್ಥಿತರಿದ್ದರು. ರಾಜ್ಯ ವಕ್ತಾರರು, ಪಕ್ಷದ ಮುಖಂಡರು ಮತ್ತು ಅಪೇಕ್ಷಿತರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

 

 

Related