ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಕೇಸ್: ಚುರುಕುಗೊಂಡ ತನಿಖೆ

  • In Crime
  • August 2, 2023
  • 172 Views
ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಕೇಸ್: ಚುರುಕುಗೊಂಡ ತನಿಖೆ

ಉಡುಪಿ: ಉಡುಪಿಜಿಲ್ಲೆಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಿಯಪ್ಪ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದ್ದು, ಆರೋಪಿತರ ಸ್ನೇಹಿತರ ಮೊಬೈಲ್ಗಳನ್ನು ವಶಕ್ಕೆ ಪಡೆದು ಪೊಲೀಸರ ತಂಡ ಪರಿಶೀಲನೆ ನಡೆಸುತ್ತಿದ್ದಾರೆ.

ಕಾಲೇಜಿಗೆ ಐಜಿಪಿ ಭೇಟಿ ನೀಡಿದ್ದ ಹಿನ್ನೆಲೆ ಉಡುಪಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಈ ವೇಳೆ ಸಂತ್ರಸ್ತ ವಿದ್ಯಾರ್ಥಿನಿಯ ಹೇಳಿಕೆಯನ್ನು ಮಹಿಳಾ ಅಧಿಕಾರಿಗಳು ದಾಖಲಿಸಿಕೊಂಡಿದ್ದರು. ಅಲ್ಲದೇ ಸ್ಥಳದಲ್ಲಿ ಆಪರೇಟ್ ಆಗುತ್ತಿದ್ದ ಎಲ್ಲ ಮೊಬೈಲ್ಗಳ ಕಾಲ್ ಡೀಟೇಲ್ಸ್ಗಳನ್ನು ಪತ್ತೆ ಹಚ್ಚಿದ್ದರು. ಮೊಬೈಲ್ಗಳನ್ನು ಎಫ್ಎಸ್ಎಲ್ಗೆ ಕಳುಹಿಸಿದ್ದರು. ಜೊತೆಗೆ ಅನಗತ್ಯ ವ್ಯಕ್ತಿಗಳು ಕಾಂಪೌಂಡ್ ಆವರಣದಲ್ಲಿ ಓಡಾಟ ಆರೋಪ ಕೇಳಿಬಂದಿದ್ದ ಹಿನ್ನೆಲೆ ಕಾಲೇಜು ಆವರಣದಲ್ಲಿನ ಸಿಸಿ ಕ್ಯಾಮರಾಗಳನ್ನು ವಶಕ್ಕೆ ಪಡೆದಿದ್ದರು.

ಈ ಸಂಬಂಧ ಉಡುಪಿಯಲ್ಲಿ ತನಿಖಾಧಿಕಾರಿಯನ್ನು ಬದಲಾವಣೆಮಾಡಲು ಬೃಹತ್ ಪ್ರತಿಭಟನೆ ಮಾಡಿ ಮತ್ತು ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿದ್ದರು. ಅಲ್ಲದೇ ಆರಂಭದಿಂದ ಪ್ರಕರಣದ ತನಿಖೆ ನಡೆಸಿಕೊಂಡು ಬಂದಿದ್ದ ಮಲ್ಪೆ ಇನ್ಸ್ಪೆಕ್ಟರ್ ಮಂಜುನಾಥ್ ಗೌಡರನ್ನು ಬದಲಾಯಿಸಬೇಕೆಂಬ ಒತ್ತಾಯ ಕೇಳಿಬಂದಿತ್ತು.

ಈ ಹಿನ್ನೆಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಮಲ್ಪೆ ಇನ್ಸ್ಪೆಕ್ಟರ್ ಮಂಜುನಾಥ್ ಗೌಡ ಅವರನ್ನು ಬದಲಾವಣೆ ಮಾಡಿ, ಈ ಹಿಂದೆ ಮಂಗಳೂರು ವಿಮಾನ ನಿಲ್ದಾಣದ ಬಾಂಬ್ ಪ್ರಕರಣ ಮತ್ತು ಶಿರೂರು ಸ್ವಾಮೀಜಿ ಸಾವು ಪ್ರಕರಣದಲ್ಲಿ ದಕ್ಷ ತನಿಖಾಧಿಕಾರಿಯಾಗಿ ಬೆಳ್ಳಿಯಪ್ಪ ಕೆಲಸ ಮಾಡಿದ್ದ, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯನ್ನಾಗಿ ಉಡುಪಿ ಎಸ್ಪಿ ಅಕ್ಷಯ್ ನೇಮಕ ಮಾಡಿದ್ದರು ಎಂದು ತಿಳಿದು ಬಂದಿದೆ.

ವರದಿಗಾರರು

ಎಲ್.ಮಂಜುನಾಥ(ವಿಜಯನಗರ)

Related