ಸ್ಫೋಟ ದುರಂತಕ್ಕೆ ಕಿಚ್ಚ ಸುದೀಪ್ ಕಂಬನಿ

ಸ್ಫೋಟ ದುರಂತಕ್ಕೆ ಕಿಚ್ಚ ಸುದೀಪ್ ಕಂಬನಿ

ಬೆಂಗಳೂರು : ಸ್ಫೋಟ ಪ್ರಕರಣದಲ್ಲಿ 5 ಕಾರ್ಮಿಕರು ಮೃತಪಟ್ಟಿದ್ದು, ದುರಂತದ ಬಗ್ಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತೀವ್ರ ಸಂತಾಪ ಸೂಚಿಸಿದ್ದಾರೆ.

ಈ ವೇಳೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಶಿವಮೊಗ್ಗದ ಹುಣಸೋಡಿಯಲ್ಲಿ ಮೃತಪಟ್ಟ ಕಾರ್ಮಿಕರ ಆತ್ಮಕ್ಕೆ ಶಾಂತಿ ಸಿಗಲಿ. ಪ್ರತಿ ಪ್ರಾಣವೂ ಅಮೂಲ್ಯ. ಈ ಬಗ್ಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿ ಎಂದು ಹೇಳಿದ್ದಾರೆ.

ಶಿವಮೊಗ್ಗದ ಹುಣಸೋಡಿಯಲ್ಲಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಕ್ವಾರಿಯಲ್ಲಿ ಲಾರಿಯಲ್ಲಿ ತುಂಬಿದ್ದ ಜಿಲೆಟಿನ್ ಸ್ಫೋಟಗೊಂಡ ಪರಿಣಾಮ 5 ಕಾರ್ಮಿಕರು ಮೃತಪಟ್ಟಿದ್ದರು.

ಲಾರಿಯಲ್ಲಿದ್ದ 50 ಜಿಲೆಟಿನ್ ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಕಾರ್ಮಿಕರ ದೇಹ ಛಿದ್ರ ಛಿದ್ರಗೊಂಡಿದ್ದು, ಮೃತರ ಬಗ್ಗೆ ಸಂಪೂರ್ಣ ಮಾಹಿತಿ ಸಿಗದ ಸ್ಥಿತಿಯಲ್ಲಿ ಮೃತ ದೇಹಗಳು ಚೂರು ಚೂರಾಗಿವೆ.

Related