ಮಂಡ್ಯ : ಜಿಲ್ಲೆಯ ರಾಜಕಾರಣದಲ್ಲಿ ಕೆಲಕಾಲ ಸಂಚಲನ ಮೂಡಿಸಿ, ಸಂಸದೆ ಸುಮಲತಾ ಅಂಬರೀಷ್ ಅವರು ಶುಕ್ರವಾರ ಇಲ್ಲಿನ ಆರ್ಎಸ್ಎಸ್ ಕಚೇರಿಗೆ ದಿಢೀರ್ ಭೇಟಿ ನೀಡಿದರು.
ಆರ್ಎಸ್ಎಸ್ನ ಮಂಡ್ಯ ಜಿಲ್ಲಾ ಪ್ರಚಾರಕ್ ಉಮೇಶ್ ಅವರನ್ನ ಭೇಟಿ ಮಾಡಿದ ಸಂಸದೆ, ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಹಣ ನೀಡುವ ಮೂಲಕ ಸಾಥ್ ನೀಡಿದರು.
ನನ್ನ ಭೇಟಿ ಹಿಂದೆ ಯಾವ ರಾಜಕೀಯವೂ ಇಲ್ಲ. ನಂಬಿಕೆ, ಸಂಪ್ರದಾಯಗಳಿಗೆ ರಾಜಕೀಯ ಬಣ್ಣ ನೀಡುವುದು ತಪ್ಪು. ರಾಮಮಂದಿರ ನಿರ್ಮಾಣ ಅಭಿಯಾನದಲ್ಲಿ ಭಾಗವಹಿಸಲು ಬಂದಿದ್ದೇನೆ ಎಂದು ಸುದ್ದಿಗಾರರಿಗೆ ತಿಳಿಸಿದರು.