ಸುರೇಶ್ ಅಂಗಡಿ ತಾಯಿಯ ಆಕ್ರಂದನ

ಸುರೇಶ್ ಅಂಗಡಿ ತಾಯಿಯ ಆಕ್ರಂದನ

ಬೆಳಗಾವಿ : ಕೇಂದ್ರ ಸಚಿವ ಸುರೇಶ್ ಅಂಗಡಿ ನಿನ್ನೆ ಕೊರೋನಾದಿಂದ ನಿಧನರಾಗಿದ್ದಾರೆ. ಸುರೇಶ್ ಸಂಗಡಿ ತಾಯಿ ಸೋಮವ್ವ ಅವರ ಆಕ್ರಂದನ ಮುಗಿಲು ಮುಟ್ಟಿದ್ದು ಕೊನೆಯ ಬಾರಿ ಮಗನ ಮುಖ ನೋಡಲು ಅವಕಾಶ ಸಿಗದೆ ತೀವ್ರ ದುಃಖ ಅನುಭವಿಸುತ್ತಿದ್ದಾರೆ.

ಸೋಮವ್ವ ಮಗನ ಸಾವಿನ ಸುದ್ದಿ ಕೇಳಿ ನಿನ್ನೆಯೇ ಕೆ.ಕೆ ಕೊಪ್ಪದಿಂದ ಬೆಳಗಾವಿ ನಿವಾಸಕ್ಕೆ ಆಗಮಿಸಿದ್ದಾರೆ. ಆದ್ರೆ ಏಮ್ಸ್ ಆಸ್ಪತ್ರೆಯಲ್ಲಿರುವ ಅಂಗಡಿ ಅವರ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರುವುದು ಅನುಮಾನವಾಗಿದೆ.

ಕೊರೋನಾ ಗೈಡ್‌ಲೈನ್ಸ್ನಂತೆ ಅವರ ಅಂತ್ಯಕ್ರಿಯೆಯನ್ನು ದೆಹಲಿಯಲ್ಲೇ ನಡೆಸಲು ನಿರ್ಧರಿಸಲಾಗಿದೆ. ಮಗನ ಅಕಾಲಿಕ ನಿಧನದ ನೋವು ಒಂದೆಡೆಯಾದೆರೆ, ಕೊನೆಯದಾಗಿ ಮಗನ ಮುಖ ನೋಡುವ ಅವಕಾಶ ಸಿಗದ್ದಕ್ಕೆ ಸೋಮವ್ವ ಅತೀವವಾಗಿ ದುಃಖಿಸುತ್ತಿದ್ದಾರೆ.

Related