ಪ್ರವಾಸಿಗರಿಗೆ ಸಿಹಿ ಸುದ್ದಿ

ಪ್ರವಾಸಿಗರಿಗೆ ಸಿಹಿ ಸುದ್ದಿ

ಚಿಕ್ಕಬಳ್ಳಾಪುರ : ವಿಶ್ವವಿಖ್ಯಾತ ನಂದಿಗಿರಿಧಾಮದ ಲಾಕ್ ಡೌನ್ ಮುಕ್ತವಾಗಲಿದ್ದು, ಸೆಪ್ಟೆಂಬರ್ 7 ರಿಂದ ಪ್ರವಾಸಿಗರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಆರ್. ಲತಾ, ಕೊರೊನಾ ಭೀತಿಯಿಂದ ಬಂದ್ ಆಗಿದ್ದ ನಂದಿ ಗಿರಿಧಾಮ ಪ್ರವೇಶಕ್ಕೆ ಅನುಮತಿ ನೀಡಿದ್ದು, ಪ್ರತಿದಿನ ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಮಾತ್ರ ಪ್ರವಾಸಿಗರಿಗೆ ಪ್ರವೇಶಕ್ಕೆ ಅನುಮತಿ ನೀಡಿ ಸಮಯ ನಿಗದಿ ಪಡಿಸಿದ್ದಾರೆ.

ಕೊರೂನಾ ಭೀತಿಯಿಂದ ನಂದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶವನ್ನು ಬಂದ್ ಮಾಡಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆದೇಶ ನೀಡಿತ್ತು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಲಾಕ್ ಡೌನ್ ಆನ್ ಲಾಕ್ ಮಾರ್ಗಸೂಚಿ 4.0 ಬಿಡುಗಡೆ ಮಾಡಿದ ನಂತರ ಜಿಲ್ಲಾಡಳಿತ ನಂದಿಬೆಟ್ಟಕ್ಕೆ ತೆರಳಲು ಲಾಕ್ ಡೌನ್ ತೆರವುಗೊಳಿಸಿದೆ.

Related