ಆತಂಕದಲ್ಲಿ ತಾಲೂಕಿನ ಜನರು !

ಆತಂಕದಲ್ಲಿ ತಾಲೂಕಿನ ಜನರು !

ವಿಜಯಪುರ : ಜಿಲ್ಲೆಯ ಕೊಲ್ಹಾರ ತಾಲೂಕಿನ ಹಲವು ಗ್ರಾಮಗಳಲ್ಲಿ ಭೂಮಿಯಿಂದ ನಿಗೂಢ ಶಬ್ಧ ಕೇಳಿಸಿದ್ದು, ಭೂಮಿ ಕಂಪಿಸಿರುವ ಅನುಭವವಾಗಿರುವ ಘಟನೆ ನಡೆದಿದೆ.

ಕೊಲ್ಹಾರ ತಾಲೂಕಿನ ಕೂಡಗಿ, ಮಲಘಾಣ ಸೇರಿದಂತೆ ಹಲವು ಗ್ರಾಮಗಳಲ್ಲಿ ಜನರು ಭೂಕಂಪನದ ಆತಂಕದಲ್ಲಿದ್ದಾರೆ. ನಿಗೂಢ ಶಬ್ದ ಹಾಗೂ ಕಂಪನದಿAದ ಮನೆಗಳ ಗೋಡೆಗಳು ಬಿರುಕು ಬಿಟ್ಟಿವೆ. ಕೂಡಗಿ ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗುತ್ತಿದೆ. ಹೀಗಾಗಿ ಗ್ರಾಮದ ಜನರು ಭೂಕಂಪನದ ಭೀತಿ ಎದುರಿಸುತ್ತಿದ್ದಾರೆ.

ಕೂಡಗಿ ಉಷ್ಣ ವಿದ್ಯುತ್ ಸ್ಥಾವರ, ಆಲಮಟ್ಟಿ ಡ್ಯಾಂ ಪಕ್ಕದಲ್ಲಿದ್ದು, ಭೂಕಂಪವಾದರೆ ಭಾರೀ ಹಾನಿಯಾಗುವ ಸಾಧ್ಯತೆಯಿದೆ. ಹೀಗಾಗಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡುವಂತೆ ವಿಜಯಪುರ ಜಿಲ್ಲಾಡಳಿತಕ್ಕೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

Related