ಮತ್ತೆ ಕನ್ನಡ ಚಿತ್ರರಂಗಕ್ಕೆ ತೆಲುಗು ನಟ ಚಿರಂಜೀವಿ ಎಂಟ್ರಿ?

ಮತ್ತೆ ಕನ್ನಡ ಚಿತ್ರರಂಗಕ್ಕೆ ತೆಲುಗು ನಟ ಚಿರಂಜೀವಿ ಎಂಟ್ರಿ?

ಬೆಂಗಳೂರು: ಸದ್ಯ ಸ್ಯಾಂಡಲ್ವುಡ್ ನಲ್ಲಿ ನಟ ದರ್ಶನ್ ತೂಗುದೀಪ್ ನಟನೆಯ ಕಾಟೇರ ಚಿತ್ರ ಇದೇ ಶುಕ್ರವಾರ 29ನೇ ತಾರೀಕು ತೆರೆ ಮೇಲೆ ಕಾಣಲಿದ್ದು, ದರ್ಶನ ಅಭಿಮಾನಿಗಳು ಈ ಚಿತ್ರ ನೋಡಲು ಕಾತುರದಿಂದ ಕಾಯುತ್ತಿದ್ದಾರೆ.

ಇನ್ನು ಕಾಟೇನ ಚಿತ್ರದನಂತ ನಂತರ ನಟ ದರ್ಶನ್ ರವರು ಹಲವಾರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ನಿರ್ದೇಶಕ ಪ್ರೇಮ್ ಜೊತೆಯಲ್ಲಿ ನಟ ದರ್ಶನ್ ಸಿನಿಮಾ ಮಾಡುತ್ತಿರುವುದು ಈಗಾಗಲೇ ಗೊತ್ತಿರುವ ಸಂಗತಿ. ಇನ್ನು ಕನ್ನಡ ಚಿತ್ರರಂಗಕ್ಕೆ ನಟ ದರ್ಶನ್ ಅವರ ಜೊತೆ ತೆಲುಗು ಚಿತ್ರರಂಗದ ನಟನಾಗಿರುವ ಚಿರಂಜೀವಿ ಅವರು ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಹೌದು, ಅತಿಥಿ ಪಾತ್ರಕ್ಕಾಗಿ ತೆಲುಗಿನ ಸೂಪರ್‌ಸ್ಟಾರ್ ಚಿರಂಜೀವಿ ಅವರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ. ಪ್ರೇಮ್ ಅವರು ಚಿರಂಜೀವಿ ಅವರನ್ನು ಭೇಟಿ ಮಾಡಿ, ಚಿತ್ರದ ಕಥೆಯನ್ನು ಹೇಳಿದ್ದು, ಇದೀಗ ಚಿರಂಜೀವಿ ಅವರ ನಿರ್ಧಾರವಷ್ಟೇ ಬಾಕಿ ಉಳಿದಿದೆ ಎಂದು ತಿಳಿದುಬಂದಿದೆ.

ಒಂದು ವೇಳೆ ಚಿರಂಜೀವಿ ಅವರು ಚಿತ್ರತಂಡ ಸೇರಿಕೊಂಡರೆ 22 ವರ್ಷಗಳ ನಂತರ ಅವರು ಕನ್ನಡ ಚಿತ್ರರಂಗಕ್ಕೆ ಮರಳುತ್ತಿದ್ದಾರೆ. ಈ ಹಿಂದೆ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಸಿಪಾಯಿ ಸಿನಿಮಾದಲ್ಲಿ ಚಿರಂಜೀವಿ ಕೊನೆಯದಾಗಿ ಕಾಣಿಸಿಕೊಂಡಿದ್ದರು.

 

Related