ಮೈತ್ರಿ ಅಭ್ಯರ್ಥಿಗಳ ಟೆಂಪಲ್ ರನ್

ಮೈತ್ರಿ ಅಭ್ಯರ್ಥಿಗಳ ಟೆಂಪಲ್ ರನ್

ಬೆಂಗಳೂರು: ಈ ಬಾರಿ ಕರ್ನಾಟಕ ರಾಜ್ಯದಲ್ಲಿ ಮೈತ್ರಿ ಅಭ್ಯರ್ಥಿಗಳು ಸರಿಸುಮಾರು 28 ಕ್ಷೇತ್ರಕ್ಕೆ 28 ಕ್ಷೇತ್ರ ಗೆಲ್ಲುವ ನಿರೀಕ್ಷೆಯನ್ನು ಹೊಂದಿದ್ದು ಶತಾಯಗತಾಯ ಕರ್ನಾಟಕ ರಾಜ್ಯದಲ್ಲಿ 28 ಕ್ಷೇತ್ರಕ್ಕೆ 28 ಕ್ಷೇತ್ರ ಗೆಲ್ಲುವ ಹೊಣೆಯನ್ನು ಹೊತ್ತಿರುವ ಮೈತ್ರಿ ಅಭ್ಯರ್ಥಿಗಳು ಇಂದು ನಿರ್ಮಲಾನಂದ ಸ್ವಾಮೀಜಿಯವರ ಆಶೀರ್ವಾದ ಪಡೆಯಲು ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್, ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಮತ್ತು ಮಂಡ್ಯ ಲೋಕಸಭಾ ಅಭ್ಯರ್ಥಿಯಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದ ಗೌಡ, ರಾಜ್ಯದ ಮಾಜಿ ಉಪಮುಖ್ಯಮಂತ್ರಿಗಳಾದ ಡಾ. ಸಿ.ಎನ್. ಅಶ್ವಥನಾರಾಯಣ್, ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ, ಮಾಜಿ ಸಚಿವರಾದ ಶ್ರೀ ಜಿ.ಟಿ. ದೇವೇಗೌಡ, ಬಿಜೆಪಿ ಮಾಜಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ. ರವಿ, ತೇಜಸ್ವಿ ಸೂರ್ಯ, ಯದುವೀರ್ ಒಡೆಯರ್, ವಿ ಸೋಮಣ್ಣ ಮತ್ತಿತರರು ಭಾಗಿಯಾಗಿದ್ದರು.

 

Related