ಬಿಜೆಪಿ ಸರ್ಕಾರ 4 ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ: ಸಿಎಂ

ಬಿಜೆಪಿ ಸರ್ಕಾರ 4 ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ: ಸಿಎಂ

ಬೆಂಗಳೂರು: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರಕ್ಕೆ ಬಂದು ಕೇವಲ ಆರು ತಿಂಗಳಾಗಿದೆ. ಆದರೆ ಬಿಜೆಪಿ ಸರ್ಕಾರ ಕಳೆದ ನಾಲ್ಕು ವರ್ಷಗಳಿಂದ ಅಧಿಕಾರದಲ್ಲಿದ್ದರೂ ಬೆಂಗಳೂರಿನಲ್ಲಿ ಯಾವೆಲ್ಲ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಅವರ ವಿರುದ್ಧ ಹರಿಹಾಯ್ದಿದ್ದಾರೆ.

ಇಂದು ವಿಧಾನಸೌಧದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿಗೆ ಮಲಾರ್ಪಣೆ ಮಾಡಿ ಮಾತನಾಡಿದ ಮುಖ್ಯಮಂತ್ರಿಯವರು, ಬೆಂಗಳೂರು ನಗರದಲ್ಲಿ ಪ್ರತಿಭಾರಿ ಮಳೆ ಬಂದಾಗ ರಸ್ತೆಗಳೆಲ್ಲ ಗುಂಡಿಗಳಿಂದ ತುಂಬಿರುತ್ತವೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗ, ಕೇವಲ ರಸ್ತೆ ಗುಂಡಿಗಳ ಮುಚ್ಚುವ ಕೆಲಸವನ್ನು ಮಾಡಿಲ್ಲ. ಆದರೆ ನಮ್ಮ ಸರ್ಕಾರದ ವಿರುದ್ಧ ಒಂದಲ್ಲ ಒಂದು ಆರೋಪಗಳನ್ನು ಮಾಡುತ್ತಿದ್ದಾರೆ.

ಬಿಜೆಪಿಯವರು ಸತತ ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ಕೂಡ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಹೀಗಿರುವ ನಮ್ಮ ಸರ್ಕಾರದ ವಿರುದ್ಧ ಕಿರಿಕಾರುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Related