ಇಂದು ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲ್ಲೂಕಿನ ಹೆಸರಘಟ್ಟ ಹೋಬಳಿಯ ಶಿವಕೋಟೆ ಗ್ರಾಮ ಪಂಚಾಯಿತಿಯ ಕೊಲುವರಾಯನಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ- ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಸಂಗಪ್ಪ ಅವರು ಗ್ರಾಮದ ಜನರಿಂದ ಅಹವಾಲುಗಳನ್ನು ಸ್ವೀಕರಿಸಿದರು ಹಾಗೂ ಗ್ರಾಮದಲ್ಲಿ ಸ್ಮಶಾನಕ್ಕಾಗಿ ಜಾಗವನ್ನು ಸ್ಥಳದಲ್ಲಿಯೇ ಮಂಜೂರು ಮಾಡಿ ಪ್ರತಿಯನ್ನು ಗ್ರಾಮಪಂಚಾಯಿತಿ ಉಪಾಧ್ಯಕ್ಷ ಮಂಜುನಾಥ್ ರವರಿಗೆ ನೀಡಿದರು.
ಈ ಸಂದರ್ಭದಲ್ಲಿ ಯಲಹಂಕ ತಾಲ್ಲೂಕು ತಹಶೀಲ್ದಾರ್ ನರಸಿಂಹಮೂರ್ತಿ, ಉಪ ತಹಶೀಲ್ದಾರ್ ಬಿ. ಎ ಶ್ರೀನಿವಾಸ್, ಬೆಂಗಳೂರು ಉತ್ತರ ಉಪವಿಭಾಗಧಿಕಾರಿ ಡಾ. ಶಿವಣ್ಣ ಹಾಗೂ ಗ್ರಾಮ ಪಂಚಾಯತಿ ಸದಸ್ಯರು, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.