ಧರ್ಮದ ಹಿಂದೆ ಹೋದರೆ ದೇಶವು ಅಭಿವೃದ್ಧಿ ಕಾಣುವುದಿಲ್ಲ: ಶಾಸಕ ಯತೀಂದ್ರ

ಧರ್ಮದ ಹಿಂದೆ ಹೋದರೆ ದೇಶವು ಅಭಿವೃದ್ಧಿ ಕಾಣುವುದಿಲ್ಲ: ಶಾಸಕ ಯತೀಂದ್ರ

ದಾವಣಗೆರೆ: ಭಾರತ ಕೇವಲ ಹಿಂದೂ ಜನಾಂಗಕ್ಕೆ ಮಾತ್ರ ಮೀಸಲಾದ, ನಮ್ಮ ಭಾರತ ದೇಶದಲ್ಲಿ ಸಾವಿರಾರು ವಿವಿಧ ರೀತಿಯ ಜಾತಿಗಳು ಒಗ್ಗೂಡಿ ನಮ್ಮ ಭಾರತ ದೇಶ ನಿರ್ಮಾಣವಾಗಿದೆ ಎಂದು ಕಾಂಗ್ರೆಸ್ ಶಾಸಕ ಯತೀಂದ್ರ ಅವರು ಹೇಳಿದ್ದಾರೆ.

ದಾವಣಗೆರೆ ಜಿಲ್ಲೆಯ ರುದ್ರನಕಟ್ಟೆ ಗ್ರಾಮದಲ್ಲಿ ಮಾತನಾಡಿದ ಅವರು, ನಮ್ಮ ಭಾರತ ದೇಶ ಕೇವಲ ಹಿಂದು ಜಾತಿಯ ಮೇಲೆ ಬದುಕುತ್ತಿಲ್ಲ. ನಮ್ಮ ದೇಶದಲ್ಲಿ ಸಾವಿರಾರು ಜಾತಿ ಒಗ್ಗೂಡಿ ಭಾರತ ದೇಶವಾಗಿದೆ ಆದ್ದರಿಂದ ನಾವು ಜಾತಿ ಹಿಂದೆ ಹೋಗೋದು ಬೇಡ ಎಂದು ಹೇಳಿದರು.

ಧರ್ಮದ ಹಿಂದೆ ಹೋದರೆ ದೇಶವು ಅಭಿವೃದ್ಧಿ ಕಾಣುವುದಿಲ್ಲ. ನಮ್ಮ ದೇಶವನ್ನು ಹಿಂದೂ ರಾಷ್ಟ್ರ ಮಾಡಲು ಹೊರಟಿದ್ದಾರೆ. ಧರ್ಮದ ಹೆಸರಿನಲ್ಲಿ ಹೋದರೆ ಭಾರತ ದೇಶ ಪಾಕಿಸ್ತಾನ, ಅಫ್ಘಾನಿಸ್ತಾನ ದೇಶಗಳಂತೆ ದಿವಾಳಿ ಆಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಮತ್ತು ಕಾಂಗ್ರೆಸ್ ಶಾಸಕ ಯತೀಂದ್ರ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

 

Related