ಸಚಿವ ಬಂಗ್ಲೆಯಲ್ಲಿ ಕಾಣಿಸಿಕೊಂಡ ಮೊಸಳೆ

ಸಚಿವ ಬಂಗ್ಲೆಯಲ್ಲಿ ಕಾಣಿಸಿಕೊಂಡ ಮೊಸಳೆ

ಹೊಸಪೇಟೆ : ಇಲ್ಲಿನ ವರ್ತುಲ ರಸ್ತೆಯಲ್ಲಿರುವ ಅರಣ್ಯ ಸಚಿವ ಆನಂದ್ ಸಿಂಗ್ ಅವರ ಬಂಗ್ಲೆ ಬಳಿ ಬುಧವಾರ ನಸುಕಿನ ಜಾವ ಮೊಸಳೆ ಕಾಣಿಸಿಕೊಂಡಿದೆ.

ಮೊಸಳೆ ಕಂಡ ಅಲ್ಲಿನ ಸಿಬ್ಬಂದಿ ತಕ್ಷಣವೇ ಅರಣ್ಯ ಇಲಾಖೆಯವರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ ಸಿಬ್ಬಂದಿ ಅದನ್ನು ಹಿಡಿದು, ತಾಲ್ಲೂಕಿನ ಕಮಲಾಪುರ ಸಮೀಪದ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನದಲ್ಲಿ ಬಿಟ್ಟರು.

ಸಚಿವರ ಬಂಗ್ಲೆ ಸಮೀಪ ತುಂಗಭದ್ರಾ ಜಲಾಶಯದ ಕೆಳಮಟ್ಟದ ಕಾಲುವೆ ಇದೆ. ಕಾಲುವೆ ಮೂಲಕ ಮೊಸಳೆ ಬಂಗ್ಲೆ ಸಮೀಪ ಬಂದಿರಬಹುದು ಎಂದು ಅರಣ್ಯ ಇಲಾಖೆಯ ಸಿಬ್ಬಂದಿ ತಿಳಿಸಿದ್ದಾರೆ.

Related