ರೈಲಿಗೆ ತಲೆಕೊಟ್ಟ ಕುಟುಂಬ

  • In Crime
  • January 28, 2021
  • 539 Views
ರೈಲಿಗೆ ತಲೆಕೊಟ್ಟ ಕುಟುಂಬ

ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲೂಕಿನ  ರೈಲು ನಿಲ್ದಾಣದ ಬಳಿ ಗುರುವಾರ ಬೆಳಗ್ಗೆ ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಸಾತಪ್ಪ ಸುತಾರ್ (60), ಮಹಾದೇವಿ (50), ದತ್ತಾತ್ರೇಯ (28), ಸಂತೋಷ್ (25) ಎಂದು ಗುರುತಿಸಲಾಗಿದೆ.

ಮೃತಪಟ್ಟವರು ಬೀರಡಿ ಗ್ರಾಮದವರು ಎಂಬ ಮಾಹಿತಿ ಲಭ್ಯವಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

ವೇಗವಾಗಿ ಚಲಿಸುವ ರೈಲಿಗೆ ತಲೆ ಕೊಟ್ಟಿದ್ದರಿಂದ ದೇಹಗಳು ಛಿದ್ರಗೊಂಡಿವೆ. ಮೃತದೇಹಗಳನ್ನು ರಾಯಬಾಗ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಬೆಳಗಾವಿ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ

Related