ಕ್ಯಾನ್ಸರ್ ಕೇಂದ್ರದ ಕಟ್ಟಡ ಶಂಕುಸ್ಥಾಪನೆ ಮಾಡಿದ ಸಿಎಂ

ಕ್ಯಾನ್ಸರ್ ಕೇಂದ್ರದ ಕಟ್ಟಡ ಶಂಕುಸ್ಥಾಪನೆ ಮಾಡಿದ ಸಿಎಂ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮತ್ತೆ ನಾಳೆ ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು, ಮೈಸೂರಿನ ಜಿಲ್ಲೆಯಲ್ಲಿ ವಿವಿಧ ಕಾಮಗಾರಿ ಕಾರ್ಯಗಳಿಗೆ ಇಂದು ಚಾಲನೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರಿನಲ್ಲಿ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಫೆರಿಫೆರಲ್ ಕ್ಯಾನ್ಸರ್ ಕೇಂದ್ರದ ಕಟ್ಟಡದ ಶಂಕುಸ್ಥಾಪನೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಯ ಬಾಲಕಿಯರ ವಿದ್ಯಾರ್ಥಿ ನಿಲಯದ ಉದ್ಘಾಟನೆಯನ್ನು ನೆರವೇರಿಸಿದರು.

ಚಾಮರಾಜ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಜಿಲ್ಲೆಯ ಶಾಸಕರುಗಳಾದ ಜಿ.ಟಿ.ದೇವೇಗೌಡ, ಶ್ರೀವತ್ಸ, ತನ್ವೀರ್ ಸೇಠ್, ಹರೀಶ್ ಗೌಡರು, ರವಿಶಂಕರ್, ಅನಿಲ್ ಚಿಕ್ಕಮಾದು,  ಆಶ್ರಯ ಸಮಿತಿ ಅಧ್ಯಕ್ಷರಾದ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಮರಿತಿಬ್ಬೇಗೌಡರು, ಎ.ಹೆಚ್.ವಿಶ್ವನಾಥ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

Related