ಅಫಜಲಪುರ : ರೈತರು ಆರ್ಥಿಕವಾಗಿ ಬಲಿಷ್ಠವಾಗಬೇಕು ಎಂಬುದು ಸರ್ಕಾರದ ಆಶಯ, ಸರ್ಕಾರ ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಸಣ್ಣ ನೀರಾವರಿ ಮತ್ತು ಕಾನುನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟಕದಲ್ಲಿ ಇತ್ತೀಚೆಗೆ ಆಗಿರುವ ಭೀಮಾ ಪ್ರವಾಹದಿಂದ ಕೆರೆ ಕಟ್ಟೆಗಳಿಗೆ, ಸೇತುವೆಗಳಿಗೆ ಆಗಿರುವ ಹಾನಿಯಗಿದೆ ಎಂದು ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಹೇಳಿದರು.
ಸುಮಾರು 72 ಕೋಟಿ ರೂ. ಅಂದಾಜು ವೆಚ್ಚದ ಘೋಳನೂರು ಹತ್ತಿರ ಬ್ಯಾರೇಜ್ ಕಂ ಬ್ರಿಡ್ಜ್ ಕಾಮಗಾರಿಗೆ ಅಡಿಗಲ್ಲು ನೆರವೇರಿಸಲಾಗಿದ್ದು, ಇದರಿಂದ ಜನರಿಗೆ ಅನುಕೂಲವಾಗಲಿದೆ ಎಂದರು.