ನಾಡ ದೇವತೆ ದರ್ಶನ ಪಡೆದ ರಾಜ್ಯಪಾಲರು

ನಾಡ ದೇವತೆ ದರ್ಶನ ಪಡೆದ ರಾಜ್ಯಪಾಲರು

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಪ್ರಾರಂಭವಾಗಿ ಇಂದಿಗೆ ನಾಲ್ಕು ದಿನವಾಗಿದೆ. ದಸರಾದ ಪ್ರಯುಕ್ತ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಇಂದು ತಾಯಿ ಚಾಮುಂಡೇಶ್ವರಿ ದರ್ಶನವನ್ನು ಪಡೆದಿದ್ದಾರೆ.

ವಿವಿಧ ಕಾರ್ಯಕ್ರಮಗಳ ನಿಮಿತ್ತ ಮೈಸೂರಿಗೆ ಭೇಟಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಬುಧವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳು ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Related