ಮತ್ತೆ ತಲೆಯೆತ್ತಿದ ಬಂಡಾಯದ ಬಿಸಿ

ಮತ್ತೆ ತಲೆಯೆತ್ತಿದ ಬಂಡಾಯದ ಬಿಸಿ

ದಾವಣಗೆರೆ: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟುತ್ತಿದ್ದು, ಮತ್ತೆ ಇದೀಗ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ನಲ್ಲಿ ಕೆಲ ಮುಖಂಡರು ಬಂಡಾಯದ ಬಾವುಟವನ್ನು ಹಾರಿಸಿದ್ದಾರೆ.

ಹೌದು, ಕಾಂಗ್ರೆಸ್ ಹೈಕಮಾಂಡ್‌ಗೆ ಆಪ್ತನಾಗಿದ್ದ ಪ್ರಭಾವಿ ಅಹಿಂದ ನಾಯಕ ಡಾ. ವೈ ರಾಮಪ್ಪ ಅವರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಶಾಮನೂರು ಕುಟುಂಬದಿಂದ ಅಹಿಂದ ವರ್ಗಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಅಹಿಂದ ವರ್ಗದ ಮುಖಂಡ ಡಾ.ವೈ.ರಾಮಪ್ಪ ಅವರು ಕಾಂಗ್ರೆಸ್‌ಗೆ ಗುಡ್ ಬೈ ಹೇಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಭೋವಿ ಸಮಾಜದ ಮುಖಂಡ ವೈ.ರಾಮಪ್ಪ ಸೇರಿದಂತೆ ಹಲವು ನಾಯಕರು ಸಾಮೂಹಿಕವಾಗಿ ಕಾಂಗ್ರೆಸ್‌ಗೆ  ರಾಜೀನಾಮೆ ನೀಡಲು ನಿರ್ಧರಿಸಿದ್ದಾರಂತೆ.

 

Related