ಬೆಂಗಳೂರು : ಲಾಡ್ಡ್ ಗೆ ಕರೆದ್ದೊಯ್ದು ಪ್ರಿಯತಮ ಪ್ರೇಯಸಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸಿಲಿಕಾನ್ ಸಿಟಿ ನಡೆದಿದೆ.
ಕಮಲ ಕೊಲೆಯಾದ ದುರ್ದೈವಿ. ಪ್ರಿಯಕರ ದಿಲೀಪ್ ಈಕೆಯನ್ನು ಲಾಡ್ಗೆ ಕರೆದೊಯ್ದು ಕೊಲೆ ಮಾಡಿದ್ದಾನೆ. ಬಳಿಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.
ಕಮಲ ಅಂಗನವಾಡಿ ಟೀಚರ್ ಆಗಿ ಕೆಲಸ ಮಾಡುತ್ತಾ ಇದ್ದಳು. ಕಲಾಸಿಪಾಳ್ಯದ ಅರ್ಚನಾ ಲಾಡ್ಡ್ ಅಲ್ಲಿ ಕಮಲಳನ್ನು ದಿಲೀಪ್ ಕೊಲೆ ಮಾಡಿದ್ದಾನೆ. ಸದ್ಯ ಕೊಲೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಕೊಲೆ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.