ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಪಿಡಿಓ

ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಪಿಡಿಓ

ಸಿರುಗುಪ್ಪ : ತಾಲೂಕಿನ ಗ್ರಾಮಪಂಚಾಯಿತಿ ಹಚ್ಚೋಳ್ಳಿಯಲ್ಲಿ 2020-21ನೇ ಸಾಲಿನಲ್ಲಿ ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಬಚ್ಚಲ ಇಂಗು ಗುಂಡಿ ನಿರ್ಮಾಣಕ್ಕೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುಳ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಮಂಜುಳ, ರಾಜ್ಯ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಯಾದ ಬಚ್ಚಲ ಇಂಗು ಗುಂಡಿಯನ್ನು ಪ್ರತಿಯೊಬ್ಬರು ಮನೆಯಲ್ಲೂ ಕಟ್ಟಿಕೊಳ್ಳಲು ರಾಜ್ಯ ಸರ್ಕಾರ 13,000 ರೂ. ಸಹಾಯಧನ ಘೋಷಣೆ ಮಾಡಿದ್ದು, ಬಚ್ಚಲ ನೀರು ಹೊರಗೆ ಬಿಡುವುದರಿಂದ ನೀರು ನಿಂತು ಸಾಂಕ್ರಮಿಕ ರೋಗಗಳು ಹರಡುವ ಸಾಧ್ಯತೆ ಇದ್ದು, ನಮ್ಮ ಸುತ್ತಮುತ್ತಲಿನ ಪರಿಸರ ಹಾನಿಯಾಗುತ್ತದೆ. ಆದ ಕಾರಣ ಇಂಗು ಗುಂಡಿ ನಿರ್ಮಾಣ ಮಾಡಿಕೊಳ್ಳುವುದರಿಂದ ಪರಿಸರ ಸ್ವಚ್ಚವಾಗಿರುತ್ತದೆ ಎಂದು ಜನರಿಗೆ ಅರಿವು ಮೂಡಿಸಿದರು.

 

Related