ರಾಜ್ಯ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ; ಬಿಜೆಪಿ ಆರೋಪ

ರಾಜ್ಯ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ; ಬಿಜೆಪಿ ಆರೋಪ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಕೋರ್ಟ್ ಮೆಟ್ಟಿಲೇರಿಸಿದ್ದಕ್ಕೆ ಇದೀಗ ರಾಜ್ಯ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆರೋಪ ಮಾಡಿದೆ.

ಹೌದು, ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರವು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪ್ರಕರಣದಲ್ಲಿ ಸೇಡಿನ ರಾಜಕಾರಣ ಮಾಡಲು ಮುಂದಾಗುತ್ತಿದೆ. ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯವರನ್ನು ಕೋರ್ಟ್‌ಗೆ ಎಳೆದಿದ್ದಕ್ಕೆ ಯಡಿಯೂರಪ್ಪ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಇದನ್ನೂ ಓದಿ: ಇದೇ ಜೂ.​ 26ರಂದು ಲೋಕಸಭಾ ಸ್ಪೀಕರ್ ಚುನಾವಣೆ

ಪ್ರಮುಖ ಬೆಳವಣಿಗೆಯೊಂದರಲ್ಲಿ, ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೊ ಪ್ರಕರಣದಲ್ಲಿ ಹಿರಿಯ ಬಿಜೆಪಿ ನಾಯಕ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ವಿಶೇಷ ನ್ಯಾಯಾಲಯ ಗುರುವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ಸಿ.ಟಿ. ರವಿ ಮಾತನಾಡಿ, ಇದು ದ್ವೇಷದ ರಾಜಕಾರಣ ಅಲ್ಲವೇ, ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಈಗ ಅದನ್ನೇ ಮಾಡುತ್ತಿದ್ದಾರೆ, ಇದನ್ನು ರಾಜ್ಯದ ಜನತೆ ಪ್ರಶ್ನಿಸುತ್ತಾರೆ ಎಂದರು.

 

Related