ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ : ಬಿ.ಸಿ.ಪಾಟೀಲ್

ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ : ಬಿ.ಸಿ.ಪಾಟೀಲ್

ತುಮಕೂರು : ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ. ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ. ಮಳೆ ಸರಿಯಾಗಿ ಬರದೆ ಕೃಷಿ ಚಟುವಟಿಕೆಗಳು ಸ್ವಲ್ಪ ಕುಂಠಿತವಾಗಿವೆ ಎಂದು ಹೇಳಿದರು.

ರೈತರು ಈಗ ಪರ್ಯಾಯ ಬೆಳೆಗಳಿಗೆ ಹೋದರೆ ಅದಕ್ಕೆ ಕೃಷಿ ಇಲಾಖೆ ಹೇಗೆ ತಯಾರಿ ಮಾಡಿ ಕೊಂಡಿದ್ದಾರೆ ಎಂಬ ಪ್ರಶ್ನೆಗೆ ನಮ್ಮ ಕೃಷಿ ಇಲಾಖೆ ಅಧಿಕಾರಿಗಳು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಸಮಸ್ಯೆ ಉಂಟಾಗುವುದಿಲ್ಲ ಎಂದು ಅವರು ತಿಳಿಸಿದರು. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಸೇರಿದಂತೆ ಬಿಜೆಪಿಯ ಮುಖಂಡರು ಹಾಜರಿದ್ದರು.

Related