ವಚನ ಭಂಗಕ್ಕಿಂತ ದೊಡ್ಡ ದೇಶದ್ರೋಹ ಮತ್ತೊಂದಿಲ್ಲ: ಸಿಎಂ

ವಚನ ಭಂಗಕ್ಕಿಂತ ದೊಡ್ಡ ದೇಶದ್ರೋಹ ಮತ್ತೊಂದಿಲ್ಲ: ಸಿಎಂ

ಬೆಂಗಳೂರು: ನಾವು ಕೇವಲ ಮಾತುಗಾರರಲ್ಲ. ಕೊಟ್ಟ ಮಾತಿನಂತೆ ಎಲ್ಲಾ ಕೆಲಸಗಳನ್ನು ಮಾಡಿ ತೋರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಗರದ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಬರೀ ಮಾತುಗಾರರು ಅಲ್ಲ. ಕೆಲಸ ಮಾಡಿ ತೋರಿಸುವವರು. ಚುನಾವಣೆ ಮುನ್ನ ನೀಡಿದ ಭರವಸೆಯಂತೆ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಜನರ ಹಿತಕ್ಕಾಗಿ ನಮ್ಮ ಕೆಲಸ. ಕೋಮು ಸಾಮರಸ್ಯವನ್ನು ಕಾಪಾಡುವುದು ನಮ್ಮ ಬಲವಾದ ನಂಬಿಕೆ. ಅದನ್ನು ಎಂತಹ ಕಷ್ಟ ಬಂದರೂ ಮಾಡುತ್ತೇವೆ.

ಜನ ವಿಶ್ವಾಸವನ್ನು ಕಳೆದುಕೊಳ್ಳದೇ ನಮ್ಮ ಜತೆಗೆ ಇರಬೇಕಷ್ಟೇ. ಇದು ಸಿಎಂ ಸಿದ್ದರಾಮಯ್ಯ ಅವರ ನುಡಿ ಎಂದರು. ವಚನ ಭಂಗಕ್ಕಿಂತ ದೊಡ್ಡ ದೇಶದ್ರೋಹ ಮತ್ತೊಂದಿಲ್ಲ ಎಂದು ನಾನು ಬಲವಾಗಿ ನಂಬಿದವನು. ಇದು ನಮ್ಮ ಪಕ್ಷದ ಬದ್ಧತೆ ಕೂಡಾ ಆಗಿದೆ. ಭರವಸೆಗಳನ್ನು ನೀಡಿ ಚುನಾವಣೆಯಲ್ಲಿ ಗೆದ್ದು ಬಂದಿರುವ ನಮಗೆ ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿಯೂ ಇದೆ. ಇದನ್ನು ನಾವು ಮರೆತಿಲ್ಲ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಗ್ಯಾರಂಟಿ ಯೋಜನೆಗಳ ಭರವಸೆಯ ಈಡೇರಿಕೆಗೆ ಮೊದಲ ಸಚಿವ ಸಂಪುಟದಲ್ಲಿಯೇ ತಾತ್ವಿಕ ಅಂಗಿಕಾರ ಪಡೆದು ಜಾರಿ ಪ್ರಕ್ರಿಯೆಗೆ ಚಾಲನೆ ನೀಡಿದ್ದೆವು. ಇದರ ಫಲವಾಗಿ ಐದು ಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಂಡಿವೆ ಎನ್ನುವುದನ್ನು ನಿಮ್ಮ ಮುಂದೆ ಹೇಳಲು ಹೆಮ್ಮೆ ಪಡುತ್ತೇನೆ ಎಂದರು.

 

Related