ಡ್ರಗ್ಸ್ ಪ್ರಕರಣ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ

ಡ್ರಗ್ಸ್ ಪ್ರಕರಣ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ

ಬಾಗಲಕೋಟೆ : ಡ್ರಗ್ಸ್ ದಂಧೆ ಪ್ರಕರಣದಲ್ಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು. ಯಾರು ತಪ್ಪು ಮಾಡಿದ್ದಾರೋ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಈ ವಿಚಾರದಲ್ಲಿ ಸರ್ಕಾರ ಹಿಂದೇಟು ಹಾಕಲ್ಲ. ಈಗಾಗಲೇ ಗೃಹ ಸಚಿವರು ಈ ಬಗ್ಗೆ ಎಲ್ಲಾ ಕ್ರಮ ಕೈಗೊಂಡು ಮಾಹಿತಿ ಕೊಟ್ಟಿದ್ದಾರೆ ಎಂದರು.

ಎಸ್ ಟಿ ಸಮುದಾಯಕ್ಕೆ 7.5 ಮೀಸಲಾತಿ ಕೊಡುವ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನ ಮಾಡುತ್ತಾರೆ. ಸಮುದಾಯದ ಸಚಿವರು ಚರ್ಚೆ ಮಾಡಿ ಮೀಸಲಾತಿ ಕೊಡುವ ಬಗ್ಗೆ ತೀರ್ಮಾನ ಮಾಡಿ ಎಂದು ತಿಳಿಸಿದರು.

Related