ಟಿಕೆಟ್ ಕೊಟ್ಟವರ ಪರ ಕೆಲಸ : ವಿಜಯೇಂದ್ರ

ಟಿಕೆಟ್ ಕೊಟ್ಟವರ ಪರ ಕೆಲಸ : ವಿಜಯೇಂದ್ರ

ಕಲಬುರ್ಗಿ : ಬಸವ ಕಲ್ಯಾಣ ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಡುತ್ತದೋ ಅವರ ಪರ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಂಭವಾದ ಶಿವಾಚಾರ್ಯರ ಸಮಾವೇಶದಲ್ಲಿ ‘ಪಕ್ಷದ ಕಾರ್ಯಕರ್ತರು ಯಡಿಯೂರಪ್ಪ ಅವರ ಮೇಲಿನ ಪ್ರೀತಿಯಿಂದ ನನಗೆ ಟಿಕೆಟ್ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಅವರ ಪ್ರೀತಿಗೆ ಋಣಿಯಾಗಿದ್ದೇನೆ ಎಂದರು.

ಖಾತೆ ಹಂಚಿಕೆಯಾದಾಗ ಅಸಮಾಧಾನ ಸಹಜ. ಮುಖ್ಯಮಂತ್ರಿ ಅವರು ಅಸಮಾಧಾನಗೊಂಡ ಸಚಿವರೊಂದಿಗೆ ಮಾತನಾಡಿ ಸಮಾಧಾನ ಮಾಡಲಿದ್ದಾರೆ ಎಂದರು.

Related