ಡಿಕೆಶಿಗೆ; ಬಿಜೆಪಿ ಟಾಂಗ್

ಡಿಕೆಶಿಗೆ; ಬಿಜೆಪಿ ಟಾಂಗ್

ಬೆಂಗಳೂರು : ಜೆಡಿಎಸ್ ಬಿತ್ತಿದ ಬೀಜ, ಕಾಂಗ್ರೆಸ್ ಪಕ್ಷದಲ್ಲಿ ಬೆಳೆಯುತ್ತಿದೆ. ಇದು ಬೆಳೆ ಅಲ್ಲ ಕಳೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಈಗ ಅರಿವಾಗುತ್ತಿದೆ. ಈ ಕಳೆ ಎಂಬ ಸಿದ್ದರಾಮಯ್ಯ ಅವರನ್ನು ಬೇರು ಸಮೇತ ಕಿತ್ತು ಹಾಕಲು ಮೂಲ ಕಾಂಗ್ರೆಸಿಗರು ಪಣ ತೊಟ್ಟಿದ್ದಾರೆ ಎಂದು ಬಿಜೆಪಿ ತಿರುಗೇಟು ನೀಡಿದೆ.
ವಲಸೆ ನಾಯಕ ಸಿದ್ದರಾಮಯ್ಯ ಅವರು ಸಂತ್ರಸ್ತ ಶಾಸಕ ಅಖಂಡ ಪರವಾಗಿ ನಿಂತರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಲಭೆಯ ಆರೋಪಿ ಸಂಪತ್‌ರಾಜ್ ಪರವಾಗಿ ನಿಂತರು. ಇವರಿಬ್ಬರ ನಡುವಿನ ಸಂಘರ್ಷದಿಂದ  ದಲಿತ ಶಾಸಕನಿಗೆ ಅನ್ಯಾಯವಾಗಿದೆ. ಕೆಪಿಸಿಸಿಯೂ ಗಲಭೆಯ ಆರೋಪಿಗೆ ಬಹಿರಂಗ ಬೆಂಬಲ ನೀಡಿದೆ ಎಂದು ಟ್ವಿಟರ್‌ನಲ್ಲಿ ಬಿಜೆಪಿ ಟಾಂಗ್ ನೀಡಿದೆ.

Related