ಸಿದ್ದು ನಿವಾಸಕ್ಕೆ ಸಿಎಂ ಪುತ್ರ

ಸಿದ್ದು ನಿವಾಸಕ್ಕೆ ಸಿಎಂ ಪುತ್ರ

ಬೆಂಗಳೂರು, ಫೆ 22 : ಸಿಎಂ ಯಡಿಯೂರಪ್ಪನವರ ಪುತ್ರ, ರಾಜ್ಯ ಬಿಜೆಪಿ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದಾರೆ.
ಎರಡು ವಾರದಲ್ಲಿ ಸಿದ್ದರಾಮಯ್ಯನವರ ನಿವಾಸಕ್ಕೆ ವಿಜಯೇಂದ್ರ ಭೇಟಿ ನೀಡುತ್ತಿರುವುದು ಇದು ಎರಡನೆಯ ಬಾರಿ. ಸಂಪುಟ ವಿಸ್ತರಣೆಗೆ ಆಹ್ವಾನಿಸಲು ವಿಜಯೇಂದ್ರ, ಸಿದ್ದರಾಮಯ್ಯ ನಿವಾಸಕ್ಕೆ ಈ ಹಿಂದೆ ಹೋಗಿದ್ದರು. ‘ಸರ್ಕಾರಿ ಸಭೆಗಳಲ್ಲಿ ಬಿ.ವೈ. ವಿಜಯೇಂದ್ರಗೆ ಏನು ಕೆಲಸ?’ ಮುಖ್ಯಮಂತ್ರಿ ಯಡಿಯೂರಪ್ಪನವರ ಜನ್ಮದಿನವನ್ನು ಅವರ ಅಭಿಮಾನಿಗಳು ಈ ಬಾರಿ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದಾರೆ. ಈ ಕಾರ್ಯಕ್ರಮಕ್ಕೆ “ದಣಿವರಿಯದ ಧೀಮಂತ’ ಎನ್ನುವ ಹೆಸರನ್ನು ಇಡಲಾಗಿದೆ. ಫೆ.27ರಂದು ಯಡಿಯೂರಪ್ಪ 78ನೇ ವಸಂತಕ್ಕೆ ಕಾಲಿಡಲಿದ್ದಾರೆ.

Related