ಯತ್ನಾಳ್ ಗೆ ಸಂಕಷ್ಟ

ಯತ್ನಾಳ್ ಗೆ ಸಂಕಷ್ಟ

ಕಲಬುರಗಿ: ಜಲ ಕಾಯ್ದೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿಯ ಶಾಸಕ ಬಸವರಾಜ್ ಯತ್ನಾಳ್ ಪಾಟೀಲ್ ಅವರ ಸಕ್ಕರೆ ಕಾರ್ಖಾನೆಯ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಜಲ ಮಾಲಿನ್ಯ ವಾಯು, ಮಾಲಿನ್ಯ ಇನ್ನಿತರ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಗರ್ ಫ್ಯಾಕ್ಟರಿ ಸುತ್ತಮುತ್ತಲಿನಲ್ಲಿ ಕಲುಶಿತ ನೀರು ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣವೇ ಶುಗರ್ ಫ್ಯಾಕ್ಟರಿಯನ್ನು ಬಂದುಮಾಡಲು ಆದೇಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.

ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಶುಗರ್ ಫ್ಯಾಕ್ಟರಿ ಮತ್ತು ಏಥೆನಾಲ್ ಘಟಕಕ್ಕೆ ಬೀಗ ಹಾಕಲು ಆದೇಶಿಸಲಾಗಿದೆ. ಕಾರ್ಖಾನೆಯ ಕಲುಷಿತ ನೀರು ಮುಲ್ಲಾಮಾರಿ ಜಲಾಶಯಕ್ಕೆ ಬೀಡಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ.

ಅಲ್ಲದೇ ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿ‌ನ್ನಲೆ ಬೀಗ ಜಡಿಯುವಂತೆ ಮಂಡಳಿ ಆದೇಶ ಹೊರಡಿಸಿದೆ. ಫ್ಯಾಕ್ಟರಿಗೆ ನೀಡಿರುವ ವಿದ್ಯುತ್, ನೀರಿನ ಸಂರ್ಪಕ ಕಡಿತಗೊಳಿಸುವಂತೆ ಆದೇಶ ಹೊರಡಿಸಿದೆ. ಈ ಬಗ್ಗೆ ಕೆಎಸ್​ಪಿಸಿಬಿ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶ ಮಾಡಿದೆ.

ಇನ್ನು ಕಳೆದ ವಾರ ಪರಿಸರ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಕೆಎಸ್‌ಪಿಸಿಬಿ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ ಬೆನ್ನಲ್ಲೇ ತುರ್ತು ಸಭೆ ನಡೆಸಿದ ಮಂಡಳಿ, ಸಕ್ಕರೆ ಕಾರ್ಖಾನೆಗಳನ್ನು ಮುಚ್ಚುವಂತೆ ನೋಟಿಸ್ ಜಾರಿಗೊಳಿಸಿದೆ. ವಿಷಾನಿಲ ಸೋರಿಕೆಯಿಂದ ಇಬ್ಬರು ಕಾರ್ಮಿಕರ ಸಾವಿಗೆ ಕಾರಣವಾದ ಹುಮ್ನಾಬಾದ್‌ನ ಪ್ರಸನ್ನ ಪ್ರಿ ಪ್ರೊಸೆಸಿಂಗ್‌ ಪ್ರೈಧಿವೇಟ್‌ ಲಿಮಿಟೆಡ್‌ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಒಡೆತನದ ಚಿಂಚೋಳಿಯ ಸಿದ್ಧಶ್ರೀ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ತಕ್ಷಣದಿಂದಲೇ ಮುಚ್ಚುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶಿಸಿದೆ.

 

Related