ಬೆಂಗಳೂರು : ದೇಶದ ಎಲ್ಲರಿಗೂ ಕೊರೋನಾ ಲಸಿಕೆ ನೀಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿಲ್ಲ ಎಂದು ಐಸಿಎಂಆರ್ ನಿರ್ದೇಶಕರ ಹೇಳಿಕೆಗೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ಗಾಂಧಿ ಕಿಡಿಕಾರಿದ್ದಾರೆ.
ಇಂದು ಬೆಳಗೆ ಟ್ವಿಟ್ ಮಾಡಿರುವ ರಾಹುಲ್ಗಾಂಧಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಯೊಬ್ಬ ಪ್ರಜೆಗೂ ಕೊರೋನಾ ಲಸಿಕೆ ನೀಡುವುದಾಗಿ ಘೋಷಣೆ ಮಾಡಿದ್ದರು.
ಈಗ ಕೇಂದ್ರ ಸರ್ಕಾರ ತನ್ನ ಮಾತನ್ನು ಬದಲಾವಣೆ ಮಾಡಿದೆ. ಪ್ರತಿಯೊಬ್ಬರಿಗೂ ಲಸಿಕೆ ಕೊಡುವುದಾಗಿ ನಾವು ಹೇಳೇ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಹಾಗಾದರೆ ಈ ಹೇಳಿಕೆಗಳ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿಲುವುಗಳು ಏನು ಎಂದು ಪ್ರಶ್ನೆ ಮಾಡಿದ್ದಾರೆ.