ಬೆಲೆಬಾಳುವ ಚಿನ್ನಾಭರಣ ಸಿಸಿಬಿ ವಶಕ್ಕೆ

ಬೆಲೆಬಾಳುವ ಚಿನ್ನಾಭರಣ ಸಿಸಿಬಿ ವಶಕ್ಕೆ

ಬೆಂಗಳೂರು : ಕುಖ್ಯಾತ ಮನೆಗಳ್ಳನೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 30 ಲಕ್ಷ ರೂ. ಬೆಲೆಬಾಳುವ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಅಬ್ದುಲ್ ಸುಲೇಮಾನ್ ಅಲಿಯಾಸ್ ರಿಹಾನ್ (26) ಬಂಧಿತ ಆರೋಪಿ. ಆತನಿಂದ 30 ಲಕ್ಷ ರೂ. ಮೌಲ್ಯದ 521 ಗ್ರಾಂ. ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ನಗರದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀನಿವಾಸ ರೆಡ್ಡಿ ಎಂಬವರ ಮನೆಯಲ್ಲಿ ಇದೇ ವರ್ಷದ ಮೇ 26ರಂದು ಕಳ್ಳರು ಮನೆಯ ಬೀಗ ಮುರಿದು ಮನೆಯಲ್ಲಿದ್ದ 355 ಗ್ರಾಂ. ತೂಕದ ಚಿನ್ನಾಭರಣ ಕಳ್ಳತನ ಮಾಡಿದ್ದನು.

ಈ ಬಗ್ಗ ಶ್ರೀನಿವಾಸ ರೆಡ್ಡಿ ಅವರು ಕಾಡುಗೋಡು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ತನಿಖೆಯನ್ನು ಪೊಲೀಸ್ ಆಯುಕ್ತರು ಸಿಸಿಬಿಗೆ ವರ್ಗಾಯಿಸಿದ್ದರು.

Related