ಬೆಂಗಳೂರು: ಇಡೀ ವಿಶ್ವವೇ ಭಾರತ ದತ್ತ ತಿರುಗಿ ನೋಡಿದಂತಹ ಇಸ್ರೋ ಸಂಸ್ಥೆಯ ಚಂದ್ರಯಾ 3 ಯಶಸ್ವಿಗೊಂಡಿದ್ದರಿಂದ ಇಂದು ಭಾರತದ ಪ್ರಧಾನಿಯಾಗಿರುವಂತಹ ನರೇಂದ್ರ ಮೋದಿಯವರು ಬೆಂಗಳೂರಿನಲ್ಲಿರುವ ಇಸ್ರೋ ಸಂಸ್ಥೆಗೆ ಭೇಟಿ ನೀಡಿ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದರು.
ಇನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ಪ್ರಾದೇಶಿಕ ಆಯುಕ್ತ ಆದಿತ್ಯ ಅಮ್ಲಾನ್ ಬಿಸ್ವಾಸ್, ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ರಿಂದ HAL ಏರ್ಪೋರ್ಟ್ನಲ್ಲಿ ಪ್ರಧಾನಿ ಮೋದಿ ಅವರಿಗೆ ಸ್ವಾಗತ ಕೋರಿದರು. ಸ್ವಾಗತಿಸಿದರು.
ಪ್ರಧಾನಿ ಮೋದಿಗಾಗಿ ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಸಾವಿರಾರು ಕಾರ್ಯಕರ್ತರು ಸೇರಿದ್ದರು. ವೀರಗಾಸೆ, ಡೊಳ್ಳು ಕುಣಿತ ಮೂಲಕ ಮೋದಿ ಅವರನ್ನು ಸ್ವಾಗತಿಸಲಾಯಿತು. ಪೋಸ್ಟರ್ಗಳು ಮತ್ತು ರಾಷ್ಟ್ರಧ್ವಜದೊಂದಿಗೆ ಎಚ್ಎಎಲ್ ವಿಮಾನ ನಿಲ್ದಾಣದ ಹೊರಗೆ ಬೀದಿಗಳಲ್ಲಿ ಜಮಾಯಿಸಿದ್ದರು.
ಹೆಚ್ಎಎಲ್ ಏರ್ಪೋರ್ಟ್ ಬಳಿ ಕಾರಿನಿಂದ ಇಳಿದು ಪ್ರಧಾನಿ ನರೇಂದ್ರ ಮೋದಿ ಜನರತ್ತ ಕೈಬೀಸಿದರು. ತ್ರಿವರ್ಣ ಧ್ವಜ ಹಿಡಿದು ಕಾರ್ಯಕರ್ತರು ಜೈಕಾರ ಹಾಕಿದರು. ಎಚ್ಎಎಲ್ ವಿಮಾನ ನಿಲ್ದಾಣದಿಂದ ಪೀಣ್ಯದಲ್ಲಿರುವ ಇಸ್ರೋ ಪ್ರಧಾನ ಕಚೇರಿಗೆ ಮೋದಿ ತೆರಳಿದರು.
ಹೆಚ್ಎಎಲ್ ಏರ್ಪೋರ್ಟ್ ಬಳಿ ಪ್ರಧಾನಮಂತ್ರಿ ಮೋದಿ ಭಾಷಣ ಮಾಡಿದರು. ಈ ವೇಳೆ ಜೈಜವಾನ್, ಕೈ ಕಿಸಾನ್, ಜೈ ವಿಜ್ಞಾನ ಎಂದು ಭಾಷಣ ಆರಂಭಿಸಿದರು. ವಿಜ್ಞಾನಿಗಳ ಸಾಧನೆ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ. ನಮ್ಮ ವಿಜ್ಞಾನಿಗಳ ಶಕ್ತಿ ಇಡೀ ವಿಶ್ವಕ್ಕೆ ಗೊತ್ತಾಗಿದೆ ಎಂದರು.
ಪೀಣ್ಯದ ಬಳಿಯ ಇಸ್ರೋ ಕೇಂದ್ರಕ್ಕೆ ಮೋದಿ ಭೇಟಿಕೊಟ್ಟು ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದರು. ಮೋದಿ ಅವರಿಗೆ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, ಯು.ಆರ್.ರಾವ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕ ಎಂ.ಶಂಕರನ್, ಇಸ್ಟ್ರಾಕ್ ನಿರ್ದೇಶಕ ಬಿ.ಎನ್.ರಾಮಕೃಷ್ಣ ಸ್ವಾಗತಿಸಿದರು.