ಆರೋಪಿಗಳ ಬಂಧನಕ್ಕೆ ಸಿದ್ದು ಸರಕಾರಕ್ಕೆ ಎಚ್ಚರಿಕೆ

ಆರೋಪಿಗಳ ಬಂಧನಕ್ಕೆ ಸಿದ್ದು ಸರಕಾರಕ್ಕೆ ಎಚ್ಚರಿಕೆ

ವಿಜಯಪುರ : ಜಿಲ್ಲೆಯ ಸಿಂದಗಿಯಲ್ಲಿ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು, ಮುಖ್ಯಮಂತ್ರಿಗಳು ತಕ್ಷಣ ಆರೋಪಿಗಳನ್ನು ಬಂಧಿಸಿ ಆತನ ವಿರುದ್ಧ ಕಾನೂನು ಕ್ರಮಕ್ಕೆ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸರಕಾರದ ವಿರುದ್ಧ ಟ್ವಿಟರ್ ಮೂಲಕ ಕಿಡಿಕಾರಿದ ಅವರು ಒಂದು ವೇಳೆ ಸರಕಾರ ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ ಎಂದಿದ್ದಾರೆ.

ಸಂವಿಧಾನವನ್ನು ಬದಲಾಯಿಸುತ್ತೇವೆ ಎನ್ನುವ, ಮೀಸಲಾತಿಯನ್ನು ವಿರೋಧಿಸುವ, ದಲಿತರನ್ನು ಕೀಳಾಗಿ ಕಾಣುವ ನಾಯಕರಿಗೆ ಬಿಜೆಪಿ ಸರಕಾರ ಬೆಂಬಲ ನೀಡುತ್ತಿದ್ದುದರಿಂದ ಇಂತಹ ಕೊಲೆಗಡುಕರು ನಿರ್ಭಯವಾಗಿ ಈ ರೀತಿಯ ದುಷ್ಕೃತ್ಯಕ್ಕೆ ಇಳಿಯಲು ಕಾರಣವಾಗಿದೆ ಎಂದು ಕಿಡಿಕಾರಿದರು.

Related