ಸರ್ಕಾರ ಬಿದ್ದರೆ ನಾವು ಚುನಾವಣೆ ಎದುರಿಸಲು ಸಿದ್ಧ

ಸರ್ಕಾರ ಬಿದ್ದರೆ ನಾವು ಚುನಾವಣೆ ಎದುರಿಸಲು ಸಿದ್ಧ

ಬಾಗಲಕೋಟೆ : ಬಿಜೆಪಿ ಸರ್ಕಾರ ಬಿದ್ದೋದ್ರೆ ನಾವು ಚುನಾವಣೆ ಎದುರಿಸಲು ಸಿದ್ಧ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ದಿನ ಯಡಿಯೂರಪ್ಪ ಸಿಎಂ ಆಗಿರಲ್ಲ ಎಂಬ ಮಾತು ಸದ್ಯ ಹೆಚ್ಚಾಗಿ ಕೇಳಿ ಬರುತ್ತಿದೆ.
ಯಡಿಯೂರಪ್ಪನವರನ್ನು ತೆಗೆಯಬೇಕೆಂದು ಬಹಳ ದೊಡ್ಡ ಚರ್ಚೆ ನಡೆದಿದೆ. ನಾವಂತೂ ಸರ್ಕಾರವನ್ನು ಬೀಳಿಸೋಕೆ ಹೋಗಲ್ಲ. ಒಂದು ವೇಳೆ ಅವರ ತಿಕ್ಕಾಟದಿಂದಲೇ ಸರ್ಕಾರ ಬಿದ್ದು ಹೋದರೆ ನಾವು ಚುನಾವಣೆ ಎದುರಿಸಲು ಸಿದ್ದರಿದ್ದೇವೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಆದರೆ ಯಾವಾಗ ಇಳಿಸ್ತಾರೆ, ಯಾರು ಸಿಎಂ ಆಗ್ತಾರೆ ಅಂತ ನನಗೆ ಗೊತ್ತಿಲ್ಲ, ಚಚೆ9ಯಂತೂ ನಡೀತಾ ಇದೆ ಎಂದರು. ಇನ್ನು, ಉತ್ತರ ಕನಾ9ಟಕದವರೇ ಸಿಎಂ ಆಗ್ತಾರೆ ಎನ್ನುವ ಯತ್ನಾಳ ಹೇಳಿಕೆಗೆ, ಅದು ಅವರ ಪಕ್ಷದ ವಿಚಾರ, ನಾನೇಕೆ ಮಾತನಾಡಲಿ, ಯಡಿಯೂರಪ್ಪನವರೆ ಮಾತನಾಡಲಿ ಎಂದು ಹೇಳಿದರು.

ಸಿಎಂ, ಯತ್ನಾಳ ಕ್ಷೇತ್ರದ ಅನುದಾನ ಕಡಿತದ ಬಗ್ಗೆ ಅಸಮಾಧಾನ ತೋರಿದ ವಿಚಾರವಾಗಿ ಮಾತನಾಡಿದ ಅವರು ನಾವು ಸತ್ಯ ಹೇಳ್ತಿದ್ವಿ, ಪಾಪ ಅವರಿಗೂ ಬಿಸಿ ಮುಟ್ಟಿದೆ. ಈಗ ಅವರು ಕೂಡ ಸತ್ಯ ಹೇಳೋಕೆ ಶುರು ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

Related