ಪಶ್ಚಿಮಬಂಗಾಳ: ಆಂಫಾನ್ ಚಂಡಮಾರುತಕ್ಕೆ 72 ಮಂದಿ ಸಾವು

ಪಶ್ಚಿಮಬಂಗಾಳ: ಆಂಫಾನ್ ಚಂಡಮಾರುತಕ್ಕೆ 72 ಮಂದಿ ಸಾವು

ಢಾಕಾ: ಪಶ್ಚಿಮ ಬಂಗಾಳದಲ್ಲಿ ಆಂಫಾನ್ ಚಂಡಮಾರುತಕ್ಕೆ 72 ಜನರು ಸಾವನ್ನಪ್ಪಿರುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ತಿಳಿಸಿದ್ದಾರೆ.

72 ಜನರಲ್ಲಿ 15 ಮಂದಿ ಕೋಲ್ಕತಾದವರು ಎಂದು ತಿಳಿಸಿದ್ದಾರೆ. ಆಂಫಾನ್ ಭೀಕರ ಚಂಡಮಾರುತಕ್ಕೆ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 72.

ನಾನು ಯಾವತ್ತೂ ಇಂತಹ ವಿಪತ್ತನ್ನು ಕಂಡಿರಲಿಲ್ಲವಾಗಿತ್ತು. ಸಾವಿನ ಪ್ರಮಾಣ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ವೀಕ್ಷಿಸಬೇಕು ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಬ್ಯಾನರ್ಜಿ ಹೇಳಿದರು.

ಆಂಫಾನ್ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಸಾವನ್ನಪ್ಪಿದವರ ಕುಟುಂಬಕ್ಕೆ 2ಲಕ್ಷ ರೂಪಾಯಿ ಪರಿಹಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

ಬಂಗಾಳದ ದಿಘಾದಲ್ಲಿ ಅಪ್ಪಳಿಸಿದ ಚಂಡಮಾರುತ ಅನಂತರದಲ್ಲಿ, ಇನ್ನಷ್ಟು ವೇಗ ಪಡೆದುಕೊಂಡಿತು. ಸಂಜೆ ವೇಳೆಗೆ 190 ಕಿ.ಮೀ. ವೇಗ ಪಡೆದುಕೊಂಡ ಪರಿಣಾಮ ಭಾರೀ ಗಾಳಿ ಮತ್ತು ಮಳೆಯಿಂದಾಗಿ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಅಪಾರ ಹಾನಿಯಾಗಿತ್ತು.

Related