ದಿಂಗಾಲೇಶ್ವರ ಸ್ವಾಮೀಜಿ ಅವರ ಬಗ್ಗೆ ಸಂತೋಷ್​ ಲಾಡ್ ಹೇಳಿದ್ದೇನು?

ದಿಂಗಾಲೇಶ್ವರ ಸ್ವಾಮೀಜಿ ಅವರ ಬಗ್ಗೆ ಸಂತೋಷ್​ ಲಾಡ್ ಹೇಳಿದ್ದೇನು?

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದ ಫಕೀರ (ಶಿವಯೋಗಿ ಸಿದ್ದರಾಮ ಸ್ವಾಮೀಜಿಯವರು) ‘ದಿಂಗಾಲೇಶ್ವರ ಸ್ವಾಮೀಜಿ ತಮ್ಮ ನಾಮಪತ್ರವನ್ನು ನಿನ್ನೆ ಏಪ್ರಿಲ್ 22ರಂದು ಹಿಂಪಡೆದಿದ್ದಾರೆ.

ಇನ್ನು ಇದರ ಬಗ್ಗೆ ಪ್ರತಿಕ್ರಿಯಿಸಿದ ಕಾರ್ಮಿಕ ಸಚಿವರಾಗಿರುವಂತ ಸಂತೋಷ್ ಲಾಡ್ ಅವರು, ಸ್ವಾಮೀಜಿಯವರ ನಡೆಯನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಿಂಗಾಲೇಶ್ವರ ಸ್ವಾಮೀಜಿಯವರಿಗೆ ನಮ್ಮ ಪಕ್ಷಕ್ಕೆ ಬೆಂಬಲ ಕೊಡಿ ಎಂದು ನಾವು ಕೇಳಿಲ್ಲ. ಬೆಂಬಲ ಘೋಷಿಸಿದರೆ ಹೆಗಲ ಮೇಲೆ ಇಟ್ಟುಕೊಳ್ಳುತ್ತೇವೆ. ಶ್ರೀಗಳ ನಡೆಯನ್ನು ಸ್ವಾಗತಿಸುತ್ತೇವೆ ಎಂದು ಸಚಿವ ಸಂತೋಷ್​ ಲಾಡ್​ ಹೇಳಿದ್ದಾರೆ.

 

Related